ನಂಜನಗೂಡು: ತಾಲೂಕಿನ ಇಮ್ಮಾವು ಗ್ರಾಮದಲ್ಲಿ ಅಡಿಗೆ ಮನೆಯಲ್ಲಿ ಅವಿತು ಕುಳಿತಿದ್ದ ನಾಗರಹಾವನ್ನು ಗೋಳೂರು ಸ್ನೇಕ್ ಬಸವರಾಜು ರಕ್ಷಣೆ ಮಾಡಿದ್ದಾರೆ.
ಗ್ರಾಮದ ಸ್ವಾಮಿ ಎಂಬುವವರ ಮನೆಯೊಳಗೆ ಅಡಿಗೆ ಮನೆಯಲ್ಲಿ ನಾಗರಹಾವೊಂದು ಅವಿತು ಕುಳಿತಿದೆ. ಅಡಿಗೆ ಮಾಡಲು ತೆರಳಿದ ಮಹಿಳೆಗೆ ನಾಗರಹಾವು ಪ್ರತ್ಯಕ್ಷವಾಗಿದೆ. ಇದನ್ನು ಕಂಡ ಮಹಿಳೆ ಗಾಬರಿಯಿಂದ ಮನೆಯಿಂದ ಹೊರಗೆ ಓಡಿ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಗೋಳೂರು ಸ್ನೇಕ್ ಬಸವರಾಜು ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಗೋಳೂರು ಸ್ನೇಕ್ ಬಸವರಾಜ್ ನಾಗರಹಾವನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ.
ಮನೆಯ ಸುತ್ತಲೂ ಸ್ವಚ್ಛತೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು. ಬಳಿಕ ನಾಗರಹಾವನ್ನು ಅರಣ್ಯಕ್ಕೆ ಬಿಡಲಾಗುತ್ತದೆ ಎಂದು ಮಾಹಿತಿ ನೀಡಿದರು.