News Karnataka Kannada
Wednesday, May 08 2024
ಮೈಸೂರು

ನಂಜನಗೂಡು: ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಮುಖಂಡರು

Nanjangud: Leaders who quit the Congress and joined the BJP
Photo Credit : News Kannada

ನಂಜನಗೂಡು: ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಶಾಸಕ ಹರ್ಷವರ್ಧನ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಕಮಲ ಹಿಡಿದು ಜೈ ಎಂದಿದ್ದಾರೆ. ಉಪ್ಪಾರ ಸಮುದಾಯದ 10 ಕ್ಕೂ ಹೆಚ್ಚು ಮುಖಂಡರು ಸೇರ್ಪಡೆಯಾಗಿ ಶಾಸಕ ಹರ್ಷವರ್ಧನ್ ರವರಿಗೆ ಬೆಂಬಲ ಸೂಚಿಸಿದ್ದಾರೆ. ಶಾಸಕ ಹರ್ಷವರ್ಧನ್   ಪಕ್ಷಕ್ಕೆ ಬರಮಾಡಿಕೊಂಡರು.

ಬಳಿಕ ಮಾತನಾಡಿದ ಶಾಸಕರು, ನಂಜನಗೂಡು ಕ್ಷೇತ್ರದಲ್ಲಿ ಶಾಸಕರಾಗಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಹಿಂದುಳಿದ ಉಪ್ಪಾರ ಸಮುದಾಯಕ್ಕೆ ನೀಡುತ್ತಿರುವ ಆದ್ಯತೆಯನ್ನು ಮೆಚ್ಚಿಕೊಂಡು ಉಪ್ಪಾರ ಸಮುದಾಯದವರು ಸೇರ್ಪಡೆಯಾಗಿದ್ದಾರೆ.

ಮತ್ತೆ ನಂಜನಗೂಡು ಕ್ಷೇತ್ರದಲ್ಲಿ ಬಿಜೆಪಿ ಬಾವುಟವನ್ನು ಹಾರಿಸುತ್ತೇನೆ. ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗ್ರಾಮದ ಪ್ರಸನ್ನ, ಶಬರಿ, ಸಿದ್ದಪ್ಪ, ಮಣಿ, ಚಂದ್ರು, ಅಭಿ, ಮಹೇಂದ್ರ, ಯೋಗೇಶ್, ಪ್ರಸಾದ್ ಮುಂತಾದ ಯುವಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಿಕ್ಕರಂಗನಾಯಕ, ಮುಖಂಡರಾದ ದೊಡ್ಡರಂಗಶೆಟ್ಟರು, ಶಿರಮಳ್ಳಿ ಮಹದೇವಸ್ವಾಮಿ, ಗ್ರಾ.ಪಂ. ಉಪಾಧ್ಯಕ್ಷ ಮಂಜುನಾಥ್, ಗ್ರಾಪಂ ಸದಸ್ಯ ಮನು, ಮುಖಂಡರಾದ ವೆಂಕಟೇಶ್, ಜವರಶೆಟ್ಟಿ, ಶಿವಣ್ಣ, ಹೆಚ್.ಕೆ. ಪ್ರಕಾಶ್, ಹೆಚ್.ಬಿ. ಚೆನ್ನಪ್ಪ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು