Categories: ಮೈಸೂರು

ನಂಜನಗೂಡು: ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಮುಖಂಡರು

ನಂಜನಗೂಡು: ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಶಾಸಕ ಹರ್ಷವರ್ಧನ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಕಮಲ ಹಿಡಿದು ಜೈ ಎಂದಿದ್ದಾರೆ. ಉಪ್ಪಾರ ಸಮುದಾಯದ 10 ಕ್ಕೂ ಹೆಚ್ಚು ಮುಖಂಡರು ಸೇರ್ಪಡೆಯಾಗಿ ಶಾಸಕ ಹರ್ಷವರ್ಧನ್ ರವರಿಗೆ ಬೆಂಬಲ ಸೂಚಿಸಿದ್ದಾರೆ. ಶಾಸಕ ಹರ್ಷವರ್ಧನ್   ಪಕ್ಷಕ್ಕೆ ಬರಮಾಡಿಕೊಂಡರು.

ಬಳಿಕ ಮಾತನಾಡಿದ ಶಾಸಕರು, ನಂಜನಗೂಡು ಕ್ಷೇತ್ರದಲ್ಲಿ ಶಾಸಕರಾಗಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಹಿಂದುಳಿದ ಉಪ್ಪಾರ ಸಮುದಾಯಕ್ಕೆ ನೀಡುತ್ತಿರುವ ಆದ್ಯತೆಯನ್ನು ಮೆಚ್ಚಿಕೊಂಡು ಉಪ್ಪಾರ ಸಮುದಾಯದವರು ಸೇರ್ಪಡೆಯಾಗಿದ್ದಾರೆ.

ಮತ್ತೆ ನಂಜನಗೂಡು ಕ್ಷೇತ್ರದಲ್ಲಿ ಬಿಜೆಪಿ ಬಾವುಟವನ್ನು ಹಾರಿಸುತ್ತೇನೆ. ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗ್ರಾಮದ ಪ್ರಸನ್ನ, ಶಬರಿ, ಸಿದ್ದಪ್ಪ, ಮಣಿ, ಚಂದ್ರು, ಅಭಿ, ಮಹೇಂದ್ರ, ಯೋಗೇಶ್, ಪ್ರಸಾದ್ ಮುಂತಾದ ಯುವಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಿಕ್ಕರಂಗನಾಯಕ, ಮುಖಂಡರಾದ ದೊಡ್ಡರಂಗಶೆಟ್ಟರು, ಶಿರಮಳ್ಳಿ ಮಹದೇವಸ್ವಾಮಿ, ಗ್ರಾ.ಪಂ. ಉಪಾಧ್ಯಕ್ಷ ಮಂಜುನಾಥ್, ಗ್ರಾಪಂ ಸದಸ್ಯ ಮನು, ಮುಖಂಡರಾದ ವೆಂಕಟೇಶ್, ಜವರಶೆಟ್ಟಿ, ಶಿವಣ್ಣ, ಹೆಚ್.ಕೆ. ಪ್ರಕಾಶ್, ಹೆಚ್.ಬಿ. ಚೆನ್ನಪ್ಪ ಭಾಗವಹಿಸಿದ್ದರು.

Gayathri SG

Recent Posts

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

12 mins ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

33 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

52 mins ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

1 hour ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

2 hours ago