News Karnataka Kannada
Friday, May 03 2024
ಮೈಸೂರು

ನಂಜನಗೂಡು: ಎಲ್ಲಾ ಸಮುದಾಯಕ್ಕೂ ಸಾಮಾಜಿಕ ನ್ಯಾಯ ನೀಡುವುದೇ ನನ್ನ ಉದ್ದೇಶ- ವಿ. ಶ್ರೀನಿವಾಸಪ್ರಸಾದ್

Nanjangud: My aim is to provide social justice to all communities. Sreenivasa Prasad
Photo Credit : News Kannada

ನಂಜನಗೂಡು: ಎಲ್ಲಾ ಸಮುದಾಯಕ್ಕೂ ಸಾಮಾಜಿಕ ನ್ಯಾಯ ನೀಡುವುದೇ ನನ್ನ ಉದ್ದೇಶ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಹೇಳಿದರು.

ನಂಜನಗೂಡು ನಗರದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳು ಮತ್ತು ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ನಂಜನಗೂಡು ನಗರದಲ್ಲಿ ಚಾಮರಾಜನಗರ ಮುಖ್ಯ ರಸ್ತೆಯಲ್ಲಿ ಎಲ್ಲಾ ಸಮುದಾಯಕ್ಕೂ ಸಾಮಾಜಿಕ ನ್ಯಾಯ ಒದಗಿಸಲು ಸಮುದಾಯಭವನಕ್ಕೆ ಜಾಗವನ್ನು ನೀಡಲಾಗಿದೆ. ಇನ್ನೂಳಿದ 16 ಗುಂಟೆಯಲ್ಲಿ ಗಾಣಿಗರು ಹಾಗೂ ಭೋವಿ ಸಮುದಾಯಕ್ಕೆ ಜಾಗವನ್ನು ಹಂಚಿಕೆ ಮಾಡಿ ಎಂದು ತಹಶೀಲ್ದಾರ್ ಶಿವಮೂರ್ತಿ ಅವರಿಗೆ ನಿರ್ದೇಶನ ನೀಡಿದರು.

20 ಗುಂಟೆ ಉಪ್ಪಾರ ಸಮುದಾಯ ಭವನ, 8 ಗುಂಟೆ ಗೆಜ್ಜಗಾರರಿಗೆ 8 ಗುಂಟೆ ತೆಲಗುಶೆಟ್ಟರಿಗೆ ನೀಡಲಾಗಿದೆ ಇನ್ನೂಳಿದ ಖಾಲಿ ಜಾಗವನ್ನು ಗಾಣಿಗರು ಮತ್ತು ಭೋವಿ ಸಮುದಾಯಕ್ಕೆ ನೀಡಿ ಎಂದರು. ಬಳೆಗಾರ ಶೆಟ್ಟರು ಸೇರಿದಂತೆ ಇನ್ನೂಳಿದ ಸಮುದಯಕ್ಕೂ ಜಾಗ ನೀಡಿ ಎಂದು ಕೇಳುತ್ತಿದ್ದಾರೆ ಎಂದು ನಗರಸಭಾ ಅಧ್ಯಕ್ಷ ಮಹದೇವಸ್ವಾಮಿ ಹೇಳಿದರು. ಮುಂದಿನ ದಿನಗಳಲ್ಲಿ ಎಲ್ಲಾ ಸಮುದಾಯಕ್ಕೂ ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಮೂರ್ತಿ, ನಗರಸಭಾ ಅಧ್ಯಕ್ಷ ಮಹದೇವಸ್ವಾಮಿ, ಮಾಜಿ ತಾಪಂ ಅಧ್ಯಕ್ಷ ಮಹದೇವಪ್ಪ, ಮಾಜಿ ತಾಪಂ ಸದಸ್ಯ ರಾಮು, ಬಿಜೆಪಿ ಮುಖಂಡ ಕುಂಬ್ರಹಳ್ಳಿ ಸುಬ್ಬಣ್ಣ, ಮಹದೇವ್ ಸೇರಿದಂತೆ ಮುಖಂಡರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು