ನವಲಗುಂದ : ರೈತ ಪರವಾದ ಯಾವುದೇ ಹೋರಾಟಗಳಿರಲಿ ನಿರಂತರವಾಗಿ ಕ್ರಿಯಾಶೀಲರಾಗಿ ಮುಂಚೂಣಿಯಲ್ಲಿ ನಿಂತು ವರದಿ ಸಲ್ಲಿಸಿದ ಹಾಗೂ ಗ್ರಾಮೀಣ ವರದಿಗಾರಿಕೆ ಮೆಚ್ಚಿ ರಾಜ್ಯದ ಪತ್ರಕರ್ತರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಸಭಾಭವನದಲ್ಲಿ ನಡೆದ ರಾಜ್ಯ ಮಟ್ಟದ ಪ್ರಥಮ ಸಮ್ಮೇಳನದಲ್ಲಿ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನವಲಗುಂದ ತಾಲೂಕಾ ಅಧ್ಯಕ್ಷ ಚರಂತಯ್ಯ ಹಿರೇಮಠ ಅವರಿಗೆ ಖಾದ್ರಿ ಅಚ್ಯುತನ್ ರಾಜ್ಯಮಟ್ಟದ ಪ್ರಶಸ್ತಿ ಹಾಗೂ ಇನ್ನೊರ್ವ ಗ್ರಾಮೀಣ ವರದಿಗಾರ ಕೆ ಡಬ್ಲ್ಯೂ ಜೆ ವಿ ಸಂಘಟನೆ ತಾಲೂಕಾ ಪ್ರದಾನಕಾರ್ಯದರ್ಶಿ ಯಲ್ಲಪ್ಪ ಭೋವಿಯವರಿಗೆ ನಂಜನಗೂಡು ತಿರುಮಲ ರಾಜ್ಯ ಮಟ್ಟದ ಪ್ರಶಸ್ತಿ ನೀಡಿದ ಸುಪ್ರೀಂ ಕೋರ್ಟ ನಿವೃತ್ತ ನ್ಯಾಯಾಮೂರ್ತಿಗಳಾದ ವಿ ಗೋಪಾಲಗೌಡರು, ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಹಾಗೂ ಗಣ್ಯರು ಸೇರಿ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿ ಗೌರವಿಸಿ ಪ್ರಶಸ್ತಿ ಪತ್ರ ವಿತರಣೆ ಮಾಡಿದರು.
ಸುಪ್ರೀಂ ಕೋರ್ಟ ನಿವೃತ್ತ ನ್ಯಾಯಾಮೂರ್ತಿ ವಿ. ಗೋಪಾಲಗೌಡರು ಮಾತನಾಡಿ ಪತ್ರಕರ್ತರು ಹಾಗೂ ಸಾಮಾಜಿಕ ಹೊಣೆಗಾರಿಕೆ ಜೊತೆಗೆ ಪತ್ರಕರ್ತರ ಇಂದಿನ ಸ್ಥಿತಿಗತಿಗಳ ಕುರಿತು ರಾಜ್ಯ ಹಾಗೂ ಕೇಂದ್ರ ಸರಕಾರಗಳು ನಡೆದು ಕೊಳ್ಳುತ್ತಿರುವ ರೀತಿಯ ಕುರಿತು ಕಠೋರವಾಗಿ ಮಾತನಾಡಿ ಪತ್ರಕರ್ತ ಸಮಸ್ಯೆಗಳು ಹಾಗೂ ಪರಿಹಾರಗಳ ಕುರಿತು ಎಳೆ ಎಳೆಯಾಗಿ ಬಿಚ್ಚಿಟ್ಟರು.
ಪೂಜ್ಯ ಮಹರ್ಷಿ ಡಾ. ಆನಂದ ಗುರೂಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕರವೇ ರಾಜ್ಯಾಧ್ಯಕ್ಷ ಪ್ರವೀಣ ಶೆಟ್ಟಿ, ಪದ್ಮಶ್ರೀ ಪ್ರಶಸ್ತಿ ವಿಜೇತ ಡಾ. ದೊಡ್ಡರಂಗೇಗೌಡರು, ಟಿವಿ 5 ಮುಖ್ಯಸ್ಥ ರಮಾನಾಥ್, ಮಹಾಮಂಡಳ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಜಾಕ್ ನದಾಫ್, ಪ್ರೆಸ್ ಕೌನ್ಸಿಲ್ ರಾಜ್ಯಾಧ್ಯಕ್ಷ ರಾಘವೇಂದ್ರ ಆಚಾರ್ಯ, ವಿಮ್ಸ್ ನಿರ್ದೇಶಕ ಡಾ. ಗಂಗಾಧರಗೌಡ ಸಂಪಾದಕ ಎಸ್ ಎಸ್ ಪಾಟೀಲ್, ಜಿಲ್ಲಾಧ್ಯಕ್ಷ ಲಕ್ಷ್ಮಣ ಕಾಮಣ್ಣವರ ಹಾಗೂ ರೈತ ಸಂಘದ ಮುಖಂಡರು ಗಣ್ಯರು ವೇದಿಕೆ ಮೇಲೆ ಉಪಸ್ಥಿತರಿದ್ದರು.