Categories: ಮೈಸೂರು

ಅನೇಕ ಭಾಗಗಳಲ್ಲಿ ಮತದಾನದ ಹಕ್ಕನ್ನು ಚಲಾಯಿಸಿದ ನವವಿವಾಹಿತ ದಂಪತಿಗಳು

ಮೈಸೂರು: ನವವಿವಾಹಿತ ದಂಪತಿಗಳು ಮತದಾನದ ದಿನದಂದು ತಮ್ಮ ಫ್ರಾಂಚೈಸ್ ಅನ್ನು ಚಲಾಯಿಸಿ ಇತರರಿಗೆ ಮಾದರಿಯಾಗಿದ್ದಾರೆ. ವಿಶೇಷವೆಂದರೆ ಮದುವೆ ಬಳಿಕ ವಧು-ವರರು ಕುಟುಂಬ ಸಮೇತ ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಿದರು. ಮೈಸೂರು ಜಿಲ್ಲೆಯ ಪ್ರಿಯಾಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಕೋಲಾರದಲ್ಲಿ ಕೂಡ ಮದುವೆಯ ನಂತರ ವಧು-ವರರಿಬ್ಬರೂ ತಮ್ಮ ಹಕ್ಕು ಚಲಾಯಿಸಿದ ಘಟನೆ ನಡೆದಿದೆ. ಮದುವೆ ಮುಗಿಸಿ ನೇರವಾಗಿ ವಿನೋಬಾ ನಗರದ ಮತಗಟ್ಟೆಗೆ ಬಂದ ವಧು-ವರರು ಮತದಾನ ಮಾಡಿದರು. ನೂತನ ವಧು-ವರರಾದ ಮಂಜುನಾಥ್ ಮತ್ತು ರೂಪಿಣಿ ಮತಗಟ್ಟೆ ಸಂಖ್ಯೆ 240ರಲ್ಲಿ ಮತ ಚಲಾಯಿಸಿ ಇತರರಿಗೆ ಮಾದರಿಯಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಂತಿಯುತ ಮತದಾನದ ನಡುವೆ ವಧು ಮತದಾನ ಮಾಡಿದರು. ಮದುವೆ ಮನೆಯಿಂದ ನೇರವಾಗಿ ಮತಗಟ್ಟೆಗೆ ಆಗಮಿಸಿ ಮದುವೆಯ ಡ್ರೆಸ್ ನಲ್ಲಿಯೇ ಮತದಾನ ಮಾಡಿದರು. ಈ ಮೂಲಕ ಮದುವೆ ಸಂಭ್ರಮದಲ್ಲೂ ಮಾದರಿಯಾದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ಉತ್ಸಾಹದಿಂದ ಹಕ್ಕು ಚಲಾಯಿಸಿದ್ದಾರೆ. ಇಲ್ಲಿನ ಚಿಕ್ಕಬಳ್ಳಾಪುರ ಕ್ಷೇತ್ರದ ಒಂದೇ ಕುಟುಂಬದ 65 ಮಂದಿ ಏಕಕಾಲಕ್ಕೆ ಬಂದು ಮತದಾನ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು. ನಗರದ ಬಾದಾಮ್ ಕುಟುಂಬದ ಸದಸ್ಯರು ಪ್ರತಿ ಚುನಾವಣೆಯಲ್ಲೂ ತಪ್ಪದೇ ಮತದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.

Sneha Gowda

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

5 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

8 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

38 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

45 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

57 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

1 hour ago