News Karnataka Kannada
Monday, April 29 2024
ಮೈಸೂರು

ಈ ಬಾರಿಯೂ ನನಗೇ ಬಿಜೆಪಿ ಟಿಕೆಟ್ – ಪ್ರತಾಪ್ ಸಿಂಹ

ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಈ ಬಾರಿಯೂ ನನಗೆ ಸಿಗಲಿದ್ದು, ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ನನ್ನ ಕೈ ಹಿಡಿಯಲಿವೆ ಎಂದು ಸಂಸದ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.
Photo Credit : By Author

ಮೈಸೂರು: ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಈ ಬಾರಿಯೂ ನನಗೆ ಸಿಗಲಿದ್ದು, ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ನನ್ನ ಕೈ ಹಿಡಿಯಲಿವೆ ಎಂದು ಸಂಸದ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಕುರಿತು ಊಹಾಪೋಹಗಳನ್ನು ಹರಡಲಾಗುತ್ತಿದೆ. ಆದರೆ, ಈ ಬಾರಿಯೂ ನನಗೆ ಟಿಕೆಟ್ ಸಿಗಲಿದ್ದು, ಮೂರನೇ ಬಾರಿಯೂ ಗೆಲುವು ಸಾಧಿಸುತ್ತೇನೆ. ಬಿಜೆಪಿ-ಜೆಡಿಎಸ್ ನಡುವೆ ಟಿಕೆಟ್ ಹಂಚಿಕೆ ಮಾತುಕತೆ ಯಾವಾಗ ಅಂತ್ಯಗೊಳ್ಳಲಿದೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ಪಕ್ಷದ ಹಿರಿಯ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ನಾನು ಮೊದಲ ಬಾರಿ ಬಂದಾಗ ನನ್ನ ಜೊತೆ ಯಾರು ಇರಲಿಲ್ಲ. ಪತ್ರಕರ್ತನಾಗಿ ಬಂದ ನನ್ನನ್ನು ಮೈಸೂರು ಹಾಗೂ ಕೊಡಗಿನ ಜನರು ಎರಡು ಬಾರಿ ಗೆಲ್ಲಿಸಿದರು. ಈಗ ನನ್ನ ಜೊತೆಯಲ್ಲಿ ಅಪಾರ ಸಂಖ್ಯೆಯ ನಾಯಕರು, ಕಾರ್ಯಕರ್ತರು ಇದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ನನ್ನ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡಿದ್ದು, ಪಕ್ಷದ ವರಿಷ್ಠ ನಾಯಕರ ಆಶೀರ್ವಾದ ಸಹ ನನಗಿದೆ ಎಂದು ಹೇಳಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು