News Karnataka Kannada
Monday, April 29 2024
ಮೈಸೂರು

ಮೈಸೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಸರ್ವ ಸಿದ್ಧತೆ

ಕೊರೊನಾ ಸೋಂಕು ಮತ್ತೆ  ಉಲ್ಭಣಗೊಂಡಿದ್ದು, ಸದ್ಯ ಮೈಸೂರಿನಲ್ಲಿ 6 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಜಿಲ್ಲಾಡಳಿತ ಸರ್ವ ಸಿದ್ಧತೆಯನ್ನು ಮಾಡಿಕೊಂಡಿದೆ.
Photo Credit : By Author

ಮೈಸೂರು: ಕೊರೊನಾ ಸೋಂಕು ಮತ್ತೆ  ಉಲ್ಭಣಗೊಂಡಿದ್ದು, ಸದ್ಯ ಮೈಸೂರಿನಲ್ಲಿ 6 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಜಿಲ್ಲಾಡಳಿತ ಸರ್ವ ಸಿದ್ಧತೆಯನ್ನು ಮಾಡಿಕೊಂಡಿದೆ.

ಕೇರಳದಲ್ಲಿ ಸೋಂಕು ಕಾಣಿಸಿಕೊಂಡ ಬೆನ್ನಲ್ಲೇ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಿದ್ದರೂ ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಆರು ಮಂದಿ ರೋಗಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಈ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ಮಾಹಿತಿ ನೀಡಿ ಯಾವುದೇ ಟ್ರಾವಲ್ ಹಿಸ್ಟರಿ ಇಲ್ಲದಿದ್ದರೂ ಕೋವಿಡ್ ಟೆಸ್ಟ್ ಮಾಡಿದಾಗ ಸೋಂಕು ಪತ್ತೆಯಾಗಿದೆ. 5 ಮಂದಿ 60 ವರ್ಷ ಮೇಲ್ಪಟ್ಟವರಾಗಿದ್ದು, 48 ವರ್ಷದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕು ಪತ್ತೆಯಾದ ಎಲ್ಲ ಆರು ಮಂದಿಗೂ ತುರ್ತು ನಿಗಾ ಘಟಕದಲ್ಲಿರಿಸಿ ಅಗತ್ಯ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ.

ಅರೋಗ್ಯ ಇಲಾಖೆ ಸೂಚನೆಯಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 1700ಕ್ಕೂ ಹೆಚ್ಚು ಬೆಡ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲೆಯಿಂದ ಕೇರಳಕ್ಕೆ ತೆರಳುವವರ ಮೇಲೆ ನಿಗಾವಹಿಸಲು ಆಶಾ ಕಾರ್ಯಕರ್ತರಿಗೆ ತಿಳಿಸಲಾಗಿದೆ. ಆಶಾ ಕಾರ್ಯಕರ್ತೆಯರ ಮೂಲಕ ಕೋವಿಡ್ ಅರಿವು ಮೂಡಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ ಎಂದರು.

ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಕರ್ನಾಟಕ ಕೇರಳ ರಾಜ್ಯಗಳ ಗಡಿ ಭಾಗವಾದ ಮೈಸೂರು ಜಿಲ್ಲೆ ಹೆಗ್ಗಡದೇವನಕೋಟೆ ತಾಲೂಕಿನಲ್ಲಿರುವ ಬಾವಲಿ ಚೆಕ್ ಪೋಸ್ಟ್ ಅನ್ನು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಪರಿಶೀಲಿಸಿದರು. ಈ ವೇಳೆ ಜಿಪಂ ಮುಖ್ಯ ಸಿಇಒ ಕೆ.ಎಂ.ಗಾಯಿತ್ರಿ, ಹುಣಸೂರು ಉಪ ವಿಭಾಗಾಧಿಕಾರಿ ರುಚಿ ಬಿಂದಾಸ್ ಹಾಗೂ ತಾಲೂಕು ಆರೋಗ್ಯಾಧಿಕಾರಿ ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಪತ್ತೆಯಾದ ಹಿನ್ನೆಲೆ ನಗರ ಕೆ.ಆರ್.ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟಿಂಗ್ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಸ್‌ಎಆರ್‌ಎ, ಐಎಲ್‌ಐ ರೋಗಿಗಳಿಗೆ ಸದ್ಯ ಆರ್‌ಟಿಪಿಸಿಆರ್ ಟೆಸ್ಟ್ ಹಾಗೂ ರ‍್ಯಾಂಡಮ್ ಟೆಸ್ಟಿಂಗ್‌ಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಅದರಂತೆ ಆಸ್ಪತ್ರೆಯಲ್ಲಿ ಟೆಸ್ಟಿಂಗ್ ಕೇಂದ್ರವನ್ನು ಪುನರ್ ಆರಂಭಿಸಲಾಗಿದೆ.

ಜಿಲ್ಲೆಯಲ್ಲಿ ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ಕೆ.ಆರ್. ಎಸ್. ರಸ್ತೆಯಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ವಿಶೇಷ ವಾರ್ಡ್ ಸಿದ್ಧಪಡಿಸಲಾಗಿದೆ. ಕೊರೊನಾ ಸೋಂಕನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಸಜ್ಜಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಸೋಂಕಿತರಿಗೆ ಅನುಕೂಲವಾಗಲೆಂದು ಐಶೋಲೇಷನ್ ಬೆಡ್, ವೆಂಟಿಲೇಟರ್ ಬೆಡ್, ಐಸಿಯು ಬೆಡ್‌ಗಳನ್ನು ಕಾಯ್ದಿರಿಸಿಕೊಂಡಿದೆ. ಈಗಾಗಲೇ ಮೈಸೂರು ಜಿಲ್ಲಾ ಆಸ್ಪತ್ರೆಯಲ್ಲಿ 73 ಐಸಿಯು ಬೆಡ್, 40 ವೆಂಟಿಲೇಟರ್ ಬೆಡ್ ಹಾಗೂ 180 ಆಕ್ಸಿಜನ್ ಬೆಡ್‌ಗಳನ್ನು ಕೋವಿಡ್ ಸೋಂಕಿತರಿಗೆ ಮೀಸಲಿಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು