ಮೈಸೂರು: ಮಧು ಮಲೈ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದ್ದು ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿಗ ದಂಪತಿ ಬೊಮ್ಮ, ಬೆಳ್ಳಿ ಜೊತೆ ಕಾವಾಡಿಗರು, ಮಾವುತರ ಜೊತೆ ಸಂವಾದ ನಡೆಸಿದರು.
ಈ ವೇಳೆ ವನ್ಯ ಜೀವಿ ಸಂರಕ್ಷಣೆಯಲ್ಲಿ ಕಾವಾಡಿಗಳ ಶ್ರಮವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಅಲ್ಲದೆ ಆನೆಗಳ ರಕ್ಷಣೆ ಜೀವವೈವಿಧ್ಯ, ಮನುಕುಲದ ಉಳಿವಿಗೆ ಅತಿ ಅಗತ್ಯ ಎಂದರು.
ರಾಷ್ಟ್ರಪತಿಗಳಿಗೆ ಸ್ವಾಗತ: ತಮಿಳುನಾಡಿನ ಮದುಮಲೈ ಅರಣ್ಯ ಪ್ರದೇಶಕ್ಕೆ ತೆರಳಲು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮ ಪುಷ್ಪಗುಚ್ಚ ನೀಡುವ ಮೂಲಕ ಬರಮಾಡಿಕೊಂಡರು. ಮುರ್ಮು ವಿಶೇಷ ಹೆಲಿಕ್ಯಾಪ್ಟರ್ ನಲ್ಲಿ ತಮಿಳುನಾಡಿನ ಮಧು ಮಲೈ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ತೆರಳಿದರು.
President Droupadi Murmu visited the Theppakadu Elephant Camp at Mudumalai Tiger Reserve. The President interacted with Mahouts and Cavadies & appreciated them for their contribution to wildlife conservation. She added that it is our national responsibility to protect elephants. pic.twitter.com/QzHPyxyZzn
— President of India (@rashtrapatibhvn) August 5, 2023