News Karnataka Kannada
Friday, May 03 2024
ಮೈಸೂರು

ಎಂಜಲು ನೀರು ಎರಚಿದವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest demanding arrest of those who threw water
Photo Credit : By Author

ಮೈಸೂರು: ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದಾಗ  ದುಷ್ಕರ್ಮಿಗಳು ಉತ್ಸವ ಮೂರ್ತಿಯ ಮೇಲೆ ಎಂಜಲು ನೀರನ್ನು ಎರಚಿದವರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕೈಗೊಳ್ಳಬೇಕೆಂದು ಒತ್ತಾಯಿಸಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ಕೋಟೆ ಆಂಜನೇಯ  ಸ್ವಾಮಿ ದೇವಸ್ಥಾನದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ಮಾತನಾಡಿ  ದುಷ್ಕರ್ಮಿಗಳು ಪೂರ್ವ ನಿಯೋಜಿತವಾಗಿ ಷಡ್ಯಂತ್ರ ಮಾಡುವ ಮೂಲಕ ಉತ್ಸವದಲ್ಲಿ ಗಲಾಟೆ ಮಾಡಿ,  ನಂಜುಂಡೇಶ್ವರ ಸ್ವಾಮಿಗೆ ಧಿಕ್ಕಾರ ಕೂಗಿದ್ದಾರೆ. ಈ ಘಟನೆಯನ್ನು ಖಂಡಿಸಿ, ಭಕ್ತರು ಮತ್ತು ಸ್ಥಳೀಯರು ಶಾಂತಿಯುತವಾಗಿ ಪ್ರತಿಭಟಿಸಿದ್ದಾರೆ. ಆದರೆ ಪೋಲೀಸರು ಆಪರಾಧಿಗಳನ್ನು ಬಂಧಿಸುವ ಬದಲು ಪ್ರತಿಭಟಿಸಿದ ಭಕ್ತರ ವಿರುದ್ಧವೇ ದೂರು ದಾಖಲಿಸಿ, ಹಿಂದೂ ವಿರೋಧಿ ಧೋರಣೆ ಅನುಸರಿಸಿದ್ದಾರೆ ಎಂದು ಆರೋಪಿಸಿದರು.

ಸಾಮಾಜಿಕ ಜಾಲತಾಣಸಲ್ಲಿ ಈಗಾಗಲೇ ಇದರ ಬಗ್ಗೆ ಸುದ್ದಿ  ಹರಡುತ್ತಿದ್ದು, ಕೋಟ್ಯಾಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದು ಸಮಾಜದಲ್ಲಿ ಸಾಮರಸ್ಯ ಕೆಡುವಂತಾಗಿದೆ  ಈ ದುಷ್ಕೃತ್ಯದಲ್ಲಿ  ಭಾಗಿಯಾಗಿದ್ದ ಕಿಡಿಗೇಡಿಗಳನ್ನ ಬಂಧಿಸಿ ಪಾರದರ್ಶಕತೆ ಕಾಪಾಡುವಂತೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು

ಪ್ರತಿಭಟನೆಯಲ್ಲಿ ಗ್ರಾಮಾಂತರ ಅಧ್ಯಕ್ಷರಾದ ಗೋಪಾಲ್ ರಾವ್,  ನಿಕಟಪೂರ್ವ ನಗರ ಪಾಲಿಕೆ ಸದಸ್ಯರಾದ ಮ ವಿ  ರಾಮ್ ಪ್ರಸಾದ್, ಅರ್ಚಕರ ಸಂಘದ ಅಧ್ಯಕ್ಷರಾದ ವಿದ್ವಾನ್ ಕೃಷ್ಣಮೂರ್ತಿ, ಎಂ ಆರ್ ಬಾಲಕೃಷ್ಣ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ಮಾಜಿನಗರ ಪಾಲಿಕಾ ಸದಸ್ಯರಾದ ಸೌಭಾಗ್ಯ ಮೂರ್ತಿ, ಮುಳ್ಳೂರು ಸುರೇಶ್, ಕಡಕೋಳ ಜಗದೀಶ್, ಸುಚೇಂದ್ರ, ಲತಾ ಬಾಲಕೃಷ್ಣ , ಜ್ಯೋತಿ, ನಾಗಶ್ರೀ, ಕೆಆರ್ ಬ್ಯಾಂಕ್  ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಜಯಸಿಂಹ ಶ್ರೀಧರ್, ಚಕ್ರಪಾಣಿ, ರಂಗನಾಥ್, ಮಧುಸೂದನ್, ಮುಳ್ಳೂರು ಸುರೇಶ್, ಶ್ರೀನಿವಾಸ್, ಮಂಜುನಾಥ್, ಸುದರ್ಶನ್ ,ಪ್ರಶಾಂತ್, ರಾಮು, ಮುರುಗೇಶ್ ಮೊದಲಾದವರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು