News Karnataka Kannada
Friday, May 03 2024
ಮೈಸೂರು

ಮದ್ಯದಂಗಡಿ ತೆರವುಗೊಳಿಸಲು ಒತ್ತಾಯಿಸಿ ಪ್ರತಿಭಟನೆ

ನಂಜನಗೂಡು ತಾಲೂಕಿನ ಸಿದ್ದಯ್ಯನಹುಂಡಿ ಗೇಟ್ ಬಳಿಯ ಮದ್ಯದಂಗಡಿ ತೆರವುಗೊಳಿಸಬೇಕೆಂದು  ಆಗ್ರಹಿಸಿ  ರ‍್ನಾಟಕ  ರಾಜ್ಯ  ರೈತ  ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
Photo Credit : By Author

ಮೈಸೂರು: ನಂಜನಗೂಡು ತಾಲೂಕಿನ ಸಿದ್ದಯ್ಯನಹುಂಡಿ ಗೇಟ್ ಬಳಿಯ ಮದ್ಯದಂಗಡಿ ತೆರವುಗೊಳಿಸಬೇಕೆಂದು  ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಅಬಕಾರಿ ಇಲಾಖೆಯ ಆವರಣದಲ್ಲಿ ಜಮಾವಣೆಗೊಂಡ ರೈತ ಸಂಘದ ಕಾರ್ಯಕರ್ತರು  ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.  ನಂಜನಗೂಡು ತಾಲ್ಲೂಕು ಕಸಬಾ ಹೋಬಳಿಯ ಕಸುವಿನಹಳ್ಳಿ ಗ್ರಾಮಕ್ಕೆ ಸೇರಿದ ಸಿದ್ದಯ್ಯನಹುಂಡಿ ಗೇಟ್ ಬಳಿ ಮದ್ಯದ ಅಂಗಡಿ ತೆರೆದಿರುವುದನ್ನು ಖಂಡಿಸಿ ಮದ್ಯದ ಅಂಗಡಿ ತೆರೆವಿಗೆ ನಿಲುವಳಿಗಳನ್ನು ಮಂಡಿಸಿ ಸರ್ವಾನುಮತದಿಂದ ಗ್ರಾಮ ಪಂಚಾಯಿತಿ ತೀರ್ಮಾನಿಸಿತ್ತು. ಇದಕ್ಕೆ ಜಿಲ್ಲಾಧಿಕಾರಿ ಒಪ್ಪಿಗೆ ನೀಡಿ ಮದ್ಯದಂಗಡಿ ತೆರವಿಗೆ ಆದೇಶ ನೀಡಿದ್ದರು. ಆದರೆ, ಇದೀಗ ಮದ್ಯದಂಗಡಿ ಬಾಗಿಲು ತೆರೆದಿರುವುದು ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮದ್ಯದಂಗಡಿ ತೆರವು ಮಾಡಲು 30ದಿನಗಳ ಗಡುವು ನೀಡಲಾಗಿತ್ತು. ಗಡುವು ಮುಗಿದು ಹೋಗಿದ್ದರೂ ಬಾರ್ ಬಾಗಿಲು  ತೆಗೆದಿರುತ್ತದೆ. ಇದಕ್ಕೆ ಅಬಕಾರಿ ಇಲಾಖೆಯ ವೈಫಲ್ಯವೇ ಕಾರಣ. ಆದ್ದರಿಂದ ಕೂಡಲೇ ಮದ್ಯದಂಗಡಿ ತೆರವುಗೊಳಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ  ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ತಾಲೂಕು ಅಧ್ಯಕ್ಷ ಶಿರಮಳ್ಳಿ ಸಿದ್ದಪ್ಪ,  ತಾಲೂಕು ಪ್ರಧಾನ ಕಾರ್ಯದರ್ಶಿ ಹೆಜ್ಜಿಗೆ ಪ್ರಕಾಶ್, ಮೈಸೂರು ತಾಲೂಕು ಗೌರವಾಧ್ಯಕ್ಷ ನಾಗನಹಳ್ಳಿ ವಿಜಯೇಂದ್ರ, ಯುವ ಘಟಕದ ಅಧ್ಯಕ್ಷ ಮಹೇಂದ್ರ ನಂಜನಗೂಡು, ಪಿ.ಮರಂಕಯ್ಯ ಹಾಗೂ ಕಸುವಿನಹಳ್ಳಿ ಗ್ರಾಪಂ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು