ನಂಜನಗೂಡು: ನಗರದ ಹೌಸಿಂಗ್ ಬೋರ್ಡ್ ಪಾರ್ಕ್ ನಲ್ಲಿ ಜನ ಸಂಪರ್ಕ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಹೆಚ್.ಸಿ ಮಹದೇವಪ್ಪ ನಡೆಸಿದ್ದಾರೆ.
ಬಳಿಕ ಮಾತನಾಡಿದ ಅವರು, ಇನ್ನೇನು ಕೆಲವೇ ತಿಂಗಳುಗಳ ಒಳಗಾಗಿ ಲೋಕಸಭಾ ಚುನಾವಣೆ ಘೋಷಣೆಯಾಗುತ್ತದೆ. ಈಗಾಗಲೇ ತಾಲ್ಲೂಕಿನಲ್ಲಿ ಅಭಿವೃದ್ಧಿಗೆ ಉಪ ಚುನಾವಣೆಯ ಸಂದರ್ಭದಲ್ಲಿ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿ ಅಭಿವೃದ್ಧಿ ಮಾಡಲಾಗಿದೆ. ಇನ್ನಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಮಾತನಾಡಿ ಅನುದಾನ ಬಿಡುಗಡೆ ಮಾಡಲಾಗುವುದು.
ನಂಜನಗೂಡು ತಾಲ್ಲೂಕನ್ನು ಅಭಿವೃದ್ಧಿಯಲ್ಲಿ ಉನ್ನತ ಶ್ರೇಣಿಗೆ ತೆಗೆದುಕೊಂಡು ಹೋಗುವುದು ನಮ್ಮ ಆದ್ಯ ಕರ್ತವ್ಯ ಮುಂಬರುವ ಲೋಕಸಭಾ ಚುನಾವಣೆ ಸ್ಥಳೀಯ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಒಗ್ಗಟಿನಿಂದ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವುದು ಕಾರ್ಯಕರ್ತರು ಮತ್ತು ಮುಖಂಡರ ಜವಾಬ್ದಾರಿಯಾಗಿರುತ್ತದೆ.
ನಂಜನಗೂಡಿನಲ್ಲಿ ಉತ್ತಮ ಶಾಸಕರನ್ನು ಆಯ್ಕೆ ಮಾಡಲಾಗಿದೆ. ವೃತ್ತಿಯಲ್ಲಿ ವಕೀಲರಾಗಿ ಸೃಜನಶೀಲ ನಾಯಕತ್ವದ ಗುಣವನ್ನು ಬೆಳೆಸಿಕೊಂಡಿದ್ದಾರೆ. ಎಲ್ಲಾ ಕಾರ್ಯಕರ್ತರ ಮತ್ತು ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಾಲ್ಲೂಕನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕಾಗಿದೆ.
ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ನಾನು ಚುನಾವಣೆಯ ಸಂದರ್ಭದಲ್ಲಿ ಹೆಚ್. ಸಿ ಮಹದೇವಪ್ಪ ಸಾಹೇಬರ ಅನುಪಸ್ಥಿತಿಯಲ್ಲಿ ಎಲ್ಲಾ ಕಾರ್ಯಕರ್ತರನ್ನ ಒಗ್ಗಟ್ಟಿನಿಂದ ಕೊಂಡ ಇದು ತಾಲ್ಲೂಕನ್ನು ಅಭಿವೃದ್ಧಿಪಡಿಸಿ ಕಾಂಗ್ರೆಸ್ ಪಕ್ಷವನ್ನು ಪ್ರಬಲವಾಗಿ ಸಂಘಟಿಸುವ ಭರವಸೆಯನ್ನು ನೀಡಲಾಗಿದೆ. ಅದೇ ರೀತಿ ನಡೆದುಕೊಳ್ಳುತ್ತೇನೆ ಎಂದರು.
ಈ ಸಭೆಯಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಉದ್ಯಮಿಗಳಾದ ಇಂದನ್ ಬಾಬು, ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಬುಲೆಟ್ ಮಹದೇವಪ್ಪ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.