ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಶ್ರೀರಾಮನ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ. ಮೈಸೂರು ಅಶೋಕ ರಸ್ತೆಯಲ್ಲಿ ಲಕ್ಷ ದೀಪೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಈಗ ಪೊಲೀಸರು ಕೊನೆ ಕ್ಷಣದಲ್ಲಿ ಅನುಮತಿಯನ್ನು ರದ್ದುಗೊಳಿಸಿದ್ದಾರೆ.
ಪೊಲೀಸರು ಅನುಮತಿ ನಿರಾಕರಣೆ ಮಾಡಿರೋದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ನಾಳೆ ಮೈಸೂರಿನಲ್ಲಿ ಅಶೋಕ ರಸ್ತೆಯಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದೀಗ ಹೆಚ್ಚು ವಾಹನ ಸಂಚಾರ ಜನ ಸಂದಣಿ ಕಾರಣ ನೀಡಿ ಅನುಮತಿ ರದ್ದುಗೊಳಿಸಲಾಗಿದೆ.
24 ದಿನ ಉರಿಯುವ ಅಗರಬತ್ತಿಗೆ ಮೈಸೂರು ಪೊಲೀಸರು ಕೇವಲ 2 ಗಂಟೆಯ ಅನುಮತಿಯನ್ನು ನೀಡಲಾಗಿದೆ. ಸೈಕಲ್ ಅಗರ್ ಬತ್ತಿಸ್ ಬರೋಬ್ಬರಿ 111 ಅಡಿ ಉದ್ದದ ಊದುಬತ್ತಿಯನ್ನು ತಯಾರಿಸಿದೆ. ಈ ಹಿನ್ನೆಲೆ ದೇವಸ್ಥಾನದ ಮುಂದೆ ಅಗರಬತ್ತಿ ಇರಿಸಲು 23 ದಿನದ ಸಮಯ ಕೇಳಲಾಗಿತ್ತು. ಆದ್ರೆ ಪೊಲೀಸರು ಎರಡು ಗಂಟೆಯ ಅನುಮತಿ ನೀಡಿರೋದಕ್ಕೆ ಭಕ್ತರು ಅಸಮಾಧಾನ ಹೊರ ಹಾಕಿದ್ದಾರೆ.