ಮೈಸೂರು: ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಮೈಸೂರು ಜಿಲ್ಲೆಯಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದು, ಮೈಸೂರು ನಗರ ಹಾಗೂ ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್ನ ಮೇಲೆ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದು, ಕಣ್ತಪ್ಪಿಸಿ ಅಕ್ರಮ ಎಸಗಿದ ಬಗ್ಗೆ ಮಾಹಿತಿ ನೀಡಿದರೆ ಅಂತಹವರಿಗೆ ಬಹುಮಾನ ನೀಡುವುದಾಗಿ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ ಅವರು ಭ್ರೂಣ ಪತ್ತೆ, ಹತ್ಯೆ ಬಗ್ಗೆ ಮಾಹಿತಿ ನೀಡಿದರೆ 50 ಸಾವಿರ ನಗದು ಬಹುಮಾನವಾಗಿ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಂಬಂಧ ಮೈಸೂರಿನ ಮಾತಾ ಆಸ್ಪತ್ರೆಯಲ್ಲೇ ಆಪರೇಷನ್ ನಡೆಯುತಿತ್ತು ಎಂಬ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಮೈಸೂರಿನ ತಾಲೂಕು ಆರೋಗ್ಯಧಿಕಾರಿ ಡಾ.ರಾಜೇಶ್ವರಿ ಮತ್ತು ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವಿ ಅವರನ್ನು ಅಮಾನತು ಮಾಡಲಾಗಿತ್ತು.
ಈಗ ಈ ಪ್ರಕರಣ ಹೆಚ್ಚು ತೀವ್ರತೆ ಪಡೆಯುತ್ತಿದ್ದು, ಮೈಸೂರು ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ಟಾಸ್ಕ್ ಪೋರ್ಸ್ ನಿಂದ ಎಲ್ಲಾ ಕಡೆ ನಿಗಾ ಇಡಲಾಗಿದೆ. ಭ್ರೂಣ ಪತ್ತೆ, ಹತ್ಯೆ ಬಗ್ಗೆ ಮಾಹಿತಿ ನೀಡಿದರೆ 50 ಸಾವಿರ ನಗದು ಬಹುಮಾನವಾಗಿ ನೀಡಲಾಗುತ್ತೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದು, ಸಾರ್ವಜನಿಕರು ಇದನ್ನು ಹೇಗೆ ಪರಿಗಣಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.
ಇನ್ನು ಅಕ್ರಮ ಎಸಗುವ ಸ್ಕ್ಯಾನಿಂಗ್ ಸೆಂಟರ್ ಗಳ ಬಗ್ಗೆ ಮಾಹಿತಿ ನೀಡಿದವರ ಬಗ್ಗೆ ಗೌಪ್ಯತೆ ಕಾಪಾಡಲಾಗುವುದಲ್ಲದೆ, ಭ್ರೂಣ ಪತ್ತೆ, ಹತ್ಯೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ದೊಡ್ಡಮಟ್ಟದ ಕಾರ್ಯಾಗಾರದ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ ತಿಳಿಸಿದ್ದಾರೆ.
ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…