ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಹೋದರ ರಾಮೇಗೌಡ ಅವರು ನಿಧನರಾಗಿದ್ದು, ಅಂತ್ಯಕ್ರಿಯೆ ಹಾಲುಮತ ಸಂಪ್ರದಾಯದಂತೆ ಹೊಸಳ್ಳಿ ಬಳಿ ಇರುವ ಅವರ ತೋಟದಲ್ಲಿ ಸಿದ್ದರಾಮಯ್ಯರವರ ಸಮ್ಮುಖದಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಶಾಸಕರಾದ ಡಾ. ಯತೀಂದ್ರಸಿದ್ದರಾಮಯ್ಯ, ಜಿ.ಟಿ.ದೇವೇಗೌಡ, ಹೆಚ್.ಪಿ.ಮಂಜುನಾಥ್, ಅಶ್ವಿನ್ಕುಮಾರ್, ಅಜಯ್ಸಿಂಗ್, ಡಾ. ತಿಮಯ್ಯ, ಎಂ.ರಾಮಯ್ಯ, ಮಾಜಿ ಸಂಸದ ಆರ್. ದ್ರುವನಾರಾಯಣ್, ಮಾಜಿ ಶಾಸಕರಾದ ಕೆ.ವೆಂಕಟೇಶ್, ಡಾ. ಹೆಚ್.ಸಿ.ಮಹಾದೇವಪ್ಪ, ಎಂ.ಕೆ. ಸೋಮಶೇಖರ್, ಕಳಲೆ ಕೇಶವಮೂರ್ತಿ, ವಾಸು, ಸಂದೇಶ್ನಾಗರಾಜ್, ಬಾಲರಾಜ್, ಸುತ್ತಮುತ್ತಲ ಗ್ರಾಮಸ್ಥರು, ಕುಟುಂಬಸ್ಥರು, ಬಂಧುಗಳು ಅಪಾರ ಸಂಖ್ಯೆಯಲ್ಲಿ ಬಂದು ಅಂತಿಮ ದರ್ಶನ ಪಡೆದರು.