News Karnataka Kannada
Wednesday, May 01 2024
ಮೈಸೂರು

ಮೈಸೂರು ಮೃಗಾಲಯ ಸುತ್ತಮುತ್ತ ನಿಶ್ಯಬ್ದ ವಲಯ ಘೋಷಣೆ

ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿ ಕೆರೆಯಲ್ಲಿನ ಸೂಕ್ಷ್ಮ ಅಪರೂಪ ಮತ್ತು ವಿನಾಶದ ಅಂಚಿನಲ್ಲಿರುವ ಪ್ರಾಣಿ ಪಕ್ಷಿಗಳು ಮತ್ತು ವನ್ಯಜೀವಿಗಳ ಸುರಕ್ಷತೆ ಹಾಗೂ ಮೃಗಾಲಯದ ವೀಕ್ಷಕರು, ಸಾರ್ವಜನಿಕರ ಸುರಕ್ಷಿತ ಹಿತದೃಷ್ಟಿಯಿಂದ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಕಾರಂಜಿ ಕರೆಯ ಸುತ್ತಮುತ್ತಲಿನ ರಸ್ತೆಗಳನ್ನು ನಿಶ್ಯಬ್ದ ವಲಯ ಎಂದು ಘೋಷಿಸಲಾಗಿದೆ.
Photo Credit : By Author

ಮೈಸೂರು: ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿ ಕೆರೆಯಲ್ಲಿನ ಸೂಕ್ಷ್ಮ ಅಪರೂಪ ಮತ್ತು ವಿನಾಶದ ಅಂಚಿನಲ್ಲಿರುವ ಪ್ರಾಣಿ ಪಕ್ಷಿಗಳು ಮತ್ತು ವನ್ಯಜೀವಿಗಳ ಸುರಕ್ಷತೆ ಹಾಗೂ ಮೃಗಾಲಯದ ವೀಕ್ಷಕರು, ಸಾರ್ವಜನಿಕರ ಸುರಕ್ಷಿತ ಹಿತದೃಷ್ಟಿಯಿಂದ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಕಾರಂಜಿ ಕರೆಯ ಸುತ್ತಮುತ್ತಲಿನ ರಸ್ತೆಗಳನ್ನು ನಿಶ್ಯಬ್ದ ವಲಯ ಎಂದು ಘೋಷಿಸಲಾಗಿದೆ.

ಎಂ.ಎಲ್ ಸೋಮಸುಂದರಂ ವೃತ್ತದಿಂದ ಎಸ್.ಲಿಂಗಣ್ಣ ವೃತ್ತದವರೆಗಿನ ಶಾಲಿವಾಹನ ರಸ್ತೆ, ಎಸ್.ಲಿಂಗಣ್ಣ ವೃತದಿಂದ ಸರ್ಕಸ್ ಗ್ರೌಂಡ್ ಜಂಕ್ಷನ್‌ವರೆಗಿನ ಲೋಕರಂಜನ್ ರಸ್ತೆ, ಸರ್ಕಸ್ ಗ್ರೌಂಡ್ ಜಂಕ್ಷನ್ ನಿಂದ ಮಹಾರಾಣಾ ಪ್ರತಾಪ ಸಿಂಹ ವೃತ್ತದ ವರೆಗಿನ ಟ್ಯಾಂಕ್ ಬಂಡ್ ರಸ್ತೆ, ಮಹಾರಾಣಾ ಪ್ರತಾಪಸಿಂಹ ವೃತದಿಂದ ಎಂ.ಎಲ್.ಸೋಮಸುಂದರಂ ವೃತ್ತದವರೆಗಿನ ಎಂ.ಜಿ ರಸ್ತೆಗಳನ್ನು ನಿಶ್ಯಬ್ದ ವಲಯ ಎಂದು ಘೋಷಿಸಿ, ರಸ್ತೆಗಳಲ್ಲಿ ಪಟಾಕಿ ಶಬ್ದ, ಧ್ವನಿವರ್ಧಕ ಶಬ್ದ ಹಾಗೂ ವಾಹನಗಳ ಹಾರ್ನ್ ಶಬ್ದಗಳನ್ನು ನಿಷೇಧಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್.ಬಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು