ಮೈಸೂರಿನಲ್ಲಿ ಅದ್ದೂರಿ ಶ್ರೀ ಕೃಷ್ಣ ಬಲರಾಮ ರಥಯಾತ್ರೆ

ಮೈಸೂರು: ಇಸ್ಕಾನ್ ದೇವಸ್ಥಾನದ ಶ್ರೀ ಕೃಷ್ಣ ಬಲರಾಮ ರಥಯಾತ್ರೆ ಶನಿವಾರ ಸಂಜೆ ಅದ್ದೂರಿಯಾಗಿ ನಡೆಯಿತು. ರಥಯಾತ್ರೆಯಲ್ಲಿ ಅನೇಕ ಸಾಂಸ್ಕೃತಿಕ ಆಕರ್ಷಣೆಗಳು, ಮಂಗಳವಾದ್ಯ ಸಹಿತ ಇಸ್ಕಾನ್ ಭಕ್ತರಿಂದ ಸಂಕೀರ್ತನೆ ನಡೆಯಿತು.

ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಆರಂಭಗೊಂಡ ರಥಯಾತ್ರೆ ದೇವರಾಜ ಅರಸು ರಸ್ತೆ, ನಾರಾಯಣಶಾಸ್ತ್ರಿ ರಸ್ತೆ, ಚಾಮರಾಜ ಜೋಡಿ ರಸ್ತೆ, ರಾಮಸ್ವಾಮಿ ವೃತ್ತ, ನ್ಯೂ ಕಾಂತರಾಜ್ ಅರಸು ರಸ್ತೆ, ಜಯನಗರ 2ನೇ ಮುಖ್ಯರಸ್ತೆಯ ಮೂಲಕ ಇಸ್ಕಾನ್ ದೇವಸ್ಥಾನ ತಲುಪಿತು. ಶ್ರೀಕೃಷ್ಣ ಬಲರಾಮರ ವಿಗ್ರಹವನ್ನು ಕೂರಿಸಿರುವ 35 ಅಡಿ ಎತ್ತರದ ರಥದ ಹಿಂದೆ ನೂರಾರು ಭಕ್ತರು ಸಾಗಿದರು. ರಥೋತ್ಸವದುದ್ದಕ್ಕೂ ಶ್ರೀ ಕೃಷ್ಣ ಬಲರಾಮರಗೆ ಜೈಕಾರ ಮೊಳಗಿದವು.

ಇದಕ್ಕೂ ಮುನ್ನ ಚೆನ್ನೈಇಸ್ಕಾನ್ ಅಧ್ಯಕ್ಷ ಸ್ತೋಕ ಕೃಷ್ಣಸ್ವಾಮಿ ಸಾನಿಧ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಶ್ರೀವತ್ಸ, ಮಾಜಿ ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್, ಮಾಜಿ ಶಾಸಕರಾದ ಎನ್.ಮಹೇಶ್, ಎಲ್.ನಾಗೇಂದ್ರ ರಥಯಾತ್ರೆಗೆ ಚಾಲನೆ ನೀಡಿದರು.

ಬಿ.ವೈ.ವಿಜಯೇಂದ್ರ ಮಾತನಾಡಿ, ಮೈಸೂರಿನಲ್ಲಿ ಇಸ್ಕಾನ್ ವತಿಯಿಂದ ಪ್ರತಿ ವರ್ಷ ಅತ್ಯಂತ ಉತ್ಸಾಹದಿಂದ ಶ್ರೀಕೃಷ್ಣ ಬಲರಾಮ ರಥೋತ್ಸವ ನಡೆಯುತ್ತದೆ. ಇದು ಒಂದು ರೀತಿಯ ಸಂತೋಷದ ಮೆರವಣಿಗೆಯೂ ಹೌದು. ಇಡೀ ನಗರದಲ್ಲಿ ಈ ರಥೋತ್ಸವ ಆಧ್ಯಾತ್ಮಿಕ ವಾತಾವರಣ ಸೃಷ್ಟಿ ಮಾಡುತ್ತದೆ. ಇದು ಸಂತೋಷ ಮತ್ತು ಭಕ್ತಿಯ ಸಂಕೇತವೂ ಆಗಿದೆ. ಎಲ್ಲರಲ್ಲೂ ಆಧ್ಯಾತ್ಮಿಕ ಮೌಲ್ಯ ಸೃಷ್ಟಿಸುವ ಈ ರಥಯಾತ್ರೆ ಯಶಸ್ವಿಯಾಗಿಲಿ. ರಥೋತ್ಸವ ಜನಸಾಮಾನ್ಯರೆಲ್ಲರಲ್ಲೂ ಭಕ್ತಿ ಭಾವ ಮೂಡಿಸಲಿ ಎಂದು ತಿಳಿಸಿದರು.

ಶಾಸಕ ಶ್ರೀವತ್ಸ ಮಾತನಾಡಿ, ಈ ಒಂದು ಸುಂದರ ಸಂಜೆಯ ಕಾರ್ಯಕ್ರಮದಲ್ಲಿ ಅಪಾರ ಭಕ್ತರು ಸೇರಿದ್ದೀರಿ. ಆ ಮೂಲಕ ಈ ರಥೋತ್ಸವಕ್ಕೆ ಕಳೆ ನೀಡಿದ್ದೀರಿ ಎಂದರು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಸ್ಕಾನ್ ದೇವಸ್ಥಾನ ನಿರ್ಮಾಣವಾದ ಮೇಲೆ ಈ ಭಾಗದ ಜನರಿಗೆ ಉತ್ತಮ ರೀತಿಯ ಪ್ರಭಾವ ಬೀರಿದೆ ಎಂದರು.

Gayathri SG

Recent Posts

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

2 mins ago

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

15 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

16 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

41 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

57 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

1 hour ago