News Karnataka Kannada
Monday, April 29 2024
ಮೈಸೂರು

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ನಾಪತ್ತೆ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಳಗಂಚಿಪುರ ಗ್ರಾಮದಲ್ಲಿ ನಡೆದಿದೆ.
Photo Credit : NewsKarnataka

ನಂಜನಗೂಡು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಳಗಂಚಿಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶೀಲಾ ಎಂಬುವವರ ಪುತ್ರ 18 ವರ್ಷದ ನಿತೀನ್ ನಂಜನಗೂಡಿನ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು. ದಿನಾಂಕ ಮಾರ್ಚ್ 20 ರಂದು ನಂಜನಗೂಡು ನಗರದ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆಯಲು ಹೋಗಿದ್ದಾರೆ.

ಪರೀಕ್ಷೆಯನ್ನು ಬರೆದು ವಿದ್ಯಾರ್ಥಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಸ್ನೇಹಿತರು ಹಾಗೂ ನೆಂಟರಿಷ್ಟರ ಮನೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಹುಡುಕಿದರು ಇವರ ಸುಳಿವು ಪತ್ತೆಯಾಗಿಲ್ಲ ನನ್ನ ಮಗನನ್ನು ಹುಡುಕಿ ಕೊಡಿ ಎಂದು ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಯ ತಾಯಿ ಶೀಲಾ ದೂರು ನೀಡಿದ್ದಾರೆ.

ಚಹರೆ: ನಿತೀನ್ , 18 ವರ್ಷ ವಯಸ್ಸು, 5 ಅಡಿ ಎತ್ತರ, ಸಾಧಾರಣ ಶರೀರ, ಕೋಲು ಮುಖ, ಹೋಗುವಾಗ ಕಾಲೇಜಿನ ಸಮವಸ್ತ್ರವನ್ನು ಧರಿಸಿದ್ದಾರೆ. ಈ ವಿದ್ಯಾರ್ಥಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಬಿಳಿಗೆರೆ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 9480805051ಕ್ಕೆ ಕರೆ ಮಾಡುವಂತೆ ಪೊಲೀಸರು ಪ್ರಕಟಣೆಯನ್ನು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು