News Karnataka Kannada
Friday, May 03 2024
ಮೈಸೂರು

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಈ ಬಾರಿ ದನಗಳ ಜಾತ್ರೆಯನ್ನು ರದ್ದು!

Cattle fair
Photo Credit : News Kannada

ಮೈಸೂರು: ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಈ ಬಾರಿ ದನಗಳ ಜಾತ್ರೆಯನ್ನು ರದ್ದು ಮಾಡಲಾಗಿದೆ.

ಈ ಬಾರಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ 53ವರ್ಷಗಳಿಂದಲೂ ನಡೆದುಕೊಂಡ ಬಂದಿರುವ ದನಗಳ ಜಾತ್ರಾ ಮಹೋತ್ಸವದಲ್ಲಿ ದನಗಳ ಜಾತ್ರೆ ರದ್ದು ಮಾಡಲಾಗಿದೆ ಎಂದು ಜಾತ್ರಾ ಸಮಿತಿಯ ಕಾರ್ಯದರ್ಶಿ ಮಂಜುನಾಥಸ್ವಾಮಿ ಹೇಳಿದರು.

ಜಿಲ್ಲೆಯಲ್ಲಿ ವ್ಯಾಪಾಕವಾಗಿ ಚರ್ಮ ಗಂಟು ರೋಗ ಹರಡಿದೆ. ಜಿಲ್ಲಾಧಿಕಾರಿಗಳ ಆದೇಶದಂತೆ ದನಗಳ ಜಾತ್ರೆ ರದ್ದು ಮಾಡಿದ್ದೇವೆ.
ರೈತರನ್ನು ಪ್ರೋತ್ಸಾಹಿಸಲು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ದನಗಳ ಜಾತ್ರೆಯನ್ನು ಆಯೋಜನೆ ಮಾಡಲಾಗುತ್ತಿದ್ದು,
ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಉತ್ತಮ ರಾಸುಗಳಿಗೆ ವಿಶೇಷ ಬಹುಮಾನ ನೀಡಲಾಗುತ್ತಿತ್ತು.

ಚರ್ಮಗಂಟು ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರದ್ದು ಮಾಡಿದ್ದೇವೆ ರೈತರು ಸಹಕರಿಸುವಂತೆ ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು