ಮೈಸೂರು: ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಈ ಬಾರಿ ದನಗಳ ಜಾತ್ರೆಯನ್ನು ರದ್ದು ಮಾಡಲಾಗಿದೆ.
ಈ ಬಾರಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ 53ವರ್ಷಗಳಿಂದಲೂ ನಡೆದುಕೊಂಡ ಬಂದಿರುವ ದನಗಳ ಜಾತ್ರಾ ಮಹೋತ್ಸವದಲ್ಲಿ ದನಗಳ ಜಾತ್ರೆ ರದ್ದು ಮಾಡಲಾಗಿದೆ ಎಂದು ಜಾತ್ರಾ ಸಮಿತಿಯ ಕಾರ್ಯದರ್ಶಿ ಮಂಜುನಾಥಸ್ವಾಮಿ ಹೇಳಿದರು.
ಜಿಲ್ಲೆಯಲ್ಲಿ ವ್ಯಾಪಾಕವಾಗಿ ಚರ್ಮ ಗಂಟು ರೋಗ ಹರಡಿದೆ. ಜಿಲ್ಲಾಧಿಕಾರಿಗಳ ಆದೇಶದಂತೆ ದನಗಳ ಜಾತ್ರೆ ರದ್ದು ಮಾಡಿದ್ದೇವೆ.
ರೈತರನ್ನು ಪ್ರೋತ್ಸಾಹಿಸಲು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ದನಗಳ ಜಾತ್ರೆಯನ್ನು ಆಯೋಜನೆ ಮಾಡಲಾಗುತ್ತಿದ್ದು,
ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಉತ್ತಮ ರಾಸುಗಳಿಗೆ ವಿಶೇಷ ಬಹುಮಾನ ನೀಡಲಾಗುತ್ತಿತ್ತು.
ಚರ್ಮಗಂಟು ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರದ್ದು ಮಾಡಿದ್ದೇವೆ ರೈತರು ಸಹಕರಿಸುವಂತೆ ಮನವಿ ಮಾಡಿದರು.