ಮೈಸೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ನಡೆದಿದೆ.
ಕೊತ್ತೇಗಾಲದ ನಿವಾಸಿ, ಚಿಲ್ಕುಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಧನರಾಜ್(48) ಎಂಬುವರೇ ಹಾವು ಕಚ್ಚಿ ಸಾವನ್ನಪ್ಪಿದ ದುರ್ದೈವಿ. ಇವರು ಎಂದಿನಂತೆ ಬೆಳಿಗ್ಗೆ ಶಾಲೆಗೆ ತೆರಳಿ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದರು.
ಕೊತ್ತೇಗಾಲದಲ್ಲಿ ಜಮೀನು ಹೊಂದಿರುವ ಅವರು ಜಮೀನಿಗೆ ತೆರಳಿ ಮನೆಯಲ್ಲಿರುವ ಹಸುಗಳಿಗೆ ಮೇವು ತರಲು ಮುಂದಾಗಿದ್ದರು. ಜಮೀನಿನಲ್ಲಿದ್ದ ಹಾವು ಅವರಿಗೆ ಕಚ್ಚಿದ್ದು ಪರಿಣಾಮ ಸಾವನ್ನಪ್ಪಿದ್ದಾರೆ. ಮೃತ ಶಿಕ್ಷಕ ಧನರಾಜ್ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.