ಕೆಆರ್ ನಗರ: ಮೈಸೂರು ಜಿಲ್ಲೆ ಪಟ್ಟಣದ ಪೊಲೀಸ್ ಠಾಣಾ ಸರಹದ್ದಿನ ಮೂಲೆಪೆಟ್ಲು ಗ್ರಾಮದ ಸಮೀಪದ ಕೆಆರ್.ಎಸ್ ಹಿನ್ನೀರಿನಲ್ಲಿ ಎರಡು ಚೀಲದಲ್ಲಿ ತುಂಬಿಟ್ಟಿದ್ದ ಶವಗಳು ಪತ್ತೆಯಾಗಿದ್ದು ಕೊಲೆ ಮಾಡಿ ಕಾವೇರಿ ನದಿಗೆ ಎಸೆದು ಹೋಗಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.
ಈ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಪಟ್ಟಣದ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಂತೋಷ್ , ಪಿಎಸ್ ಐ ಗಳಾದ ಧನರಾಜು, ನಂಜಪ್ಪ ಸಿಬ್ಬಂದಿಗಳಾದ ಧನಂಜಯ, ಜವರೇಶ್, ಮಂಜು, ದೇವರಾಜು ತಂಡ ತಡರಾತ್ರಿ ಒಬ್ಬನ ಶವ ಮೇಲೆಕ್ಕೆತ್ತಿ ಪರಿಶೀಲಿಸಿದರು. ಈರ್ವರನ್ನು ಬೇರೆ ಎಲ್ಲೋ ಕೊಲೆ ಮಾಡಿ ನಂತರ ಚೀಲದಲ್ಲಿ ಕಟ್ಟಿ ಕಾವೇರಿ ನದಿಗೆ ಬೀಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ.