News Karnataka Kannada
Thursday, May 02 2024
ಮೈಸೂರು

ವರುಣಾ: ಚಿರತೆ ದಾಳಿಗೆ ಎರಡು ಕುರಿಗಳು ಬಲಿ, ಜಮೀನುಗಳಿಗೆ ತೆರಳಲು ರೈತರ ಹಿಂದೇಟು

Two sheep killed in leopard attack
Photo Credit : News Kannada

ವರುಣಾ: ಚಿರತೆ ದಾಳಿಗೆ ಎರಡು ಕುರಿಗಳು ಬಲಿಯಾಗಿರುವ ಘಟನೆ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರವಿ ಸ್ವಾಮಿ ಎಂಬವರಿಗೆ ಸೇರಿದ ಕುರಿಗಳಾಗಿದ್ದು, ಜಮೀನಿನಲ್ಲಿ ಮೇಯಿಸುತ್ತಿದ್ದಾಗ ಚಿರತೆ ದಾಳಿ ನಡೆಸಿದೆ ಎನ್ನಲಾಗಿದೆ.

ಪೊದೆಯೊಳಗೆ ಅವಿತು ಕುಳಿತಿದ್ದ ಚಾಲಾಕಿ ಚಿರತೆ ಒಂದು ಕುರಿಯ ಮೇಲೆ ದಾಳಿ ನಡೆಸಿ, ಅದನ್ನು ತಿಂದ ನಂತರ ಮತ್ತೊಂದು ಕುರಿಯ ಮೇಲೆ ದಾಳಿ ಮಾಡಿ ಕೊಂಡೊಯ್ದಿದೆ. ಮನೆಗೆ ಬಂದು ನೋಡಿದಾಗ ಕುರಿಗಳ ಸಂಖ್ಯೆ ಕಡಿಮೆ ಇರುವುದು ತಿಳಿದಿದೆ. ಮತ್ತೆ ಆ ಸ್ಥಳಕ್ಕೆ ಬಂದು ನೋಡಿದಾಗ ಒಂದು ಕುರಿಯ ಕಳೇಬರ ಪತ್ತೆಯಾಗಿದ್ದು, ಅರೆಬೆರೆ ತಿಂದು ಹೋಗಿದೆ.

ತಗಡೂರು, ಚುಂಚನಹಳ್ಳಿ, ಕಾರ್ಯ, ಚಿನ್ನಂಬಳ್ಳಿ, ಗ್ರಾಮಗಳಲ್ಲಿ ಚಿರತೆಯ ಕಾಟ ಹೆಚ್ಚಾಗಿದ್ದು, ಜಮೀನುಗಳಿಗೆ ರೈತರು ತೆರಳಲು ಹಿಂದೇಟು ಹಾಕುತ್ತಿದ್ದಾರೆ.

ಕುರಿಗಳನ್ನು ನಂಬಿಕೊಂಡು ನಾವು ಜೀವನ ಸಾಗಿಸುತ್ತೇವೆ. ಚಿರತೆಯ ಹಾವಳಿಯಿಂದ ಜಮೀನುಗಳಿಗೆ ತೆರಲು ನಮಗೆ ಭಯ ಆಗುತ್ತಿದೆ.
ದಿನೇ ದಿನೇ ಒಂದಲ್ಲ ಒಂದು ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿದೆ. ಒಂದು ವೇಳೆ ಮನುಷ್ಯರ ಮೇಲೆ ದಾಳಿ ಮಾಡಿದರೆ ಯಾರು ಜವಾಬ್ದಾರರು ಎಂದು ಪ್ರಶ್ನಿಸಿದರು. ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬೋನು ಇರಿಸಿ ಚಿರತೆಯನ್ನು ಸೆರೆಹಿಡಿಯಬೇಕು. ಕುರಿಗಳನ್ನು ಕಳೆದುಕೊಂಡ ರೈತನಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ರೈತ ರವಿ ಸ್ವಾಮಿ ಒತ್ತಾಯ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು