ಮೈಸೂರು: ನಗರದ ಚಾಮುಂಡಿ ಬೆಟ್ಟದ ಪಾದದಲ್ಲಿ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಸೈನಿಕ ಅಕಾಡೆಮಿ ವತಿಯಿಂದ ಶನಿವಾರ ಪ್ರಾಣಿ ಪಕ್ಷಿಗಳು, ಜಾನುವಾರುಗಳಿಗೆ ನೀರು ಕುಡಿಯುಲು ತೊಟ್ಟಿಗಳನ್ನಿಡಲಾಯಿತಲ್ಲದೆ, ದನ, ಕರುಗಳು, ಕೋತಿ ಪ್ರಾಣಿ–ಪಕ್ಷಿಗಳಿಗೆ ನೀರು ಕುಡಿಯಲು ಅನುಕೂಲವಾಗುವಂತೆ ತೊಟ್ಟಿಗಳನ್ನು ಅಳವಡಿಸಲಾಯಿತು.
ಈ ವೇಳೆ ಮಾತನಾಡಿದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡರವರು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನಿಂದ ಜನರೇ ನರಕಯಾತನೆ ಅನುಭವಿಸುತ್ತಿರುವಾಗ ಮೂಕ ಪ್ರಾಣಿಗಳ ಗತಿಯೇನು ಎಂಬುದನ್ನು ಅರಿತು ಕುಡಿಯುವ ನೀರಿನ ತೊಟ್ಟಿಗಳನ್ನು ಅಳವಡಿಸುತ್ತಿರುವುದು ಶ್ಲಾಘನೀಯ ಎಂದರು.
ಸೈನಿಕ ಅಕಾಡೆಮಿ ಮೈಸೂರಿನ ಸಂಸ್ಥಾಪಕರು ಹಾಗೂ ಮಾಜಿ ಕಮಾಂಡೋ ಶ್ರೀಧರ್ ಮಾತನಾಡಿ, ವನ್ಯಜೀವಿಗಳಿಗೂ ಬದುಕುವ ಹಕ್ಕಿದೆ. ಅವುಗಳು ಆಹಾರಕ್ಕಾಗಿ ನಾಡಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಅಭಿವೃದ್ಧಿಯ ನೆಪದಲ್ಲಿ ಪರಿಸರ ಸಂರಕ್ಷಣೆ ಕಡಿಮೆಯಾಗುತ್ತಿದೆ. ಹವಾಮಾನ ವೈಪರಿತ್ಯಕ್ಕೂ ಪರಿಸರ ಸಂರಕ್ಷಣೆಯ ವೈಫಲ್ಯವೂ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಮೈಸೂರು ನಗರ ಜೆಡಿಎಸ್ ಕಾರ್ಯಧ್ಯಕ್ಷರಾದ ಪ್ರಕಾಶ್ ಪ್ರಿಯದರ್ಶನ್, ಜೆಡಿಎಸ್ ನಗರ ಉಪಾಧ್ಯಕ್ಷರಾದ ಯದು ನಂದನ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷರಾದ ಕಡಕೋಳ ಜಗದೀಶ್, ಬೈರತಿ ಲಿಂಗರಾಜು, ಸಮಾಜ ಸೇವಕರಾದ ಸವಿತಾ ಘಾಟ್ಕೆ, ನಾಗಶ್ರೀ ಸುಚಿಂದ್ರ, ಸೈನಿಕರು ಹಾಗೂ ಸೈನಿಕ ಅಕಾಡೆಮಿಯ ತರಬೇತಿ ಪಡೆಯುತ್ತಿರುವ ಮಕ್ಕಳು ಹಾಜರಿದ್ದರು.