News Karnataka Kannada
Sunday, May 12 2024
ಮೈಸೂರು

ನಂಜನಗೂಡು: ನಾವು ಅಹಂಕಾರಿಗಳಲ್ಲ ಸ್ವಾಭಿಮಾನಿಗಳು ಶಾಸಕ ಬಿ. ಹರ್ಷವರ್ಧನ್ ಟಾಂಗ್

We are not arrogant but self-respecting MLA B. Harsh Vardhan Tong
Photo Credit : News Kannada

ನಂಜನಗೂಡು: ನಗರದ ವಿದ್ಯಾವರ್ಧಕ ಮೈದಾನದಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಹಾಲಿ ಶಾಸಕ ಬಿ ಹರ್ಷವರ್ಧನ್ ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ವಿದ್ಯಾವರ್ಧಕ ಮೈದಾನದಲ್ಲಿ ಕಾರ್ಯಕರ್ತರ ಬಹಿರಂಗ ಸಭೆಯನ್ನು ಏರ್ಪಡಿಸಲಾಗಿತ್ತು.

ಸಭೆಯಲ್ಲಿ ಶಾಸಕ ಬಿ ಹರ್ಷವರ್ಧನ್ ಮಾತನಾಡಿ, ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ 823 ಕೋಟಿ ರೂ. ತಂದು ಅಭಿವೃದ್ಧಿಪಡಿಸಿದ್ದೇನೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಮತ್ತೆ ಅವಕಾಶ ನೀಡಿದರೆ ಸಾಕಷ್ಟು ಅಭಿವೃದ್ಧಿ ಪಡಿಸುತ್ತೇನೆ. ಮತ್ತೊಮ್ಮೆ ನನ್ನನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಇದು ಅನುಕಂಪ ವರ್ಸಸ್ ಅಭಿವೃದ್ಧಿಯಲ್ಲ ಅನುಕಂಪ ವರ್ಸಸ್ ಅಹಂಕಾರ ಎಂದು ಹೇಳಿಕೆ ನೀಡಿದ್ದಾರೆ. ನಾವು ಅಹಂಕಾರಿಗಳಲ್ಲ ಸ್ವಾಭಿಮಾನಿಗಳು ಎಂದು ಪತ್ರಕರ್ತ ದೀಪಕ್ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದರು.

ಸಪಾಯಿ ಕರ್ಮಚಾರಿ ನಿಗಮದ ಅಧ್ಯಕ್ಷ ಕೋಟೆ ಶಿವಣ್ಣ, ನಗರಸಭಾಧ್ಯಕ್ಷ ಮಹಾದೇವಸ್ವಾಮಿ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಚಿಕ್ಕ ರಂಗನಾಯಕ, ಕೃಷ್ಣಪ್ಪಗೌಡ, ಸೇರಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು