News Karnataka Kannada
Monday, April 29 2024
ಮೈಸೂರು

ಮೈಸೂರು: ಕಾಡಾನೆ ದಾಳಿಗೆ ಅರಣ್ಯ ವೀಕ್ಷಕ ಬಲಿ

ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದ ಸಿಬ್ಬಂದಿಯ ಮೇಲೆ ಕಾಡಾನೆ ದಾಳಿ ನಡೆಸಿ ಬಲಿ ಪಡೆದಿರುವ ಘಟನೆ ಸರಗೂರು ತಾಲ್ಲೂಕಿನ ಕೆಬ್ಬೆಪುರ ಹಾಡಿಯ ಸಮೀಪ ನಡೆದಿದೆ.
Photo Credit : News Kannada

ಮೈಸೂರು: ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದ ಸಿಬ್ಬಂದಿಯ ಮೇಲೆ ಕಾಡಾನೆ ದಾಳಿ ನಡೆಸಿ ಬಲಿ ಪಡೆದಿರುವ ಘಟನೆ ಸರಗೂರು ತಾಲ್ಲೂಕಿನ ಕೆಬ್ಬೆಪುರ ಹಾಡಿಯ ಸಮೀಪ ನಡೆದಿದೆ.

ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರು ವಿಭಾಗದ ಕೆಬ್ಬೆಪುರ ಹಾಡಿಯ ನಿವಾಸಿ ಹಾಗೂ ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿ ಸೇವೆ ಸಲ್ಲಿಸುತ್ತಿದ್ದ ಬಿ.ರಾಜು (38) ಮೃತ ದುರ್ದೈವಿ. ರಾಜು ನಾಗರಹೊಳೆ ಅರಣ್ಯ ಪ್ರದೇಶದ ಉದ್ಬೂರು ಗೇಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ಇಂದು ಬೆಳಂಬೆಳಿಗ್ಗೆಯೇ ಕೆಲಸಕ್ಕೆ ಸಿದ್ಧರಾಗಿ ಬಸ್ ಹತ್ತಲು ಕೆಬ್ಬೆಪುರ ಹಾಡಿಯಿಂದ ಮೊಳೆಯೂರಿಗೆ ನಡೆದುಕೊಂಡು ಬರುವ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಜುವಿನ ಮೃತದೇಹ ರಸ್ತೆ ಪಕ್ಕದ ಹಳ್ಳವೊಂದರಲ್ಲಿ ಬಿದಿದ್ದ ಪರಿಣಾಮ ಮಧ್ಯಾಹ್ನದವರೆಗೂ ಯಾರಿಗೂ ಮೃತದೇಹವಿರುವುದು ಗೊತ್ತಾಗಿರಲಿಲ್ಲ. ಆದರೆ ಮಧ್ಯಾಹ್ನ ರಾಜುವಿನ ಮಗಳು ಬಟ್ಟೆ ಒಗೆಯಲು ಹೋಗುವ ವೇಳೆ ತಂದೆಯ ಮೃತ ದೇಹವನ್ನು ಕಂಡು ಗಾಬರಿಗೊಂಡು ಗ್ರಾಮಸ್ಥರಿಗೆ ವಿಚಾರ ಮುಟ್ಟಿಸಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಗ್ರಾಮಸ್ಥರು ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶಗೊಂಡಿರುವ ಸ್ಥಳೀಯರು, ಈ ಭಾಗದಲ್ಲಿ ನಿರಂತರವಾಗಿ ಕಾಡುಪ್ರಾಣಿಗಳ ಹಾವಳಿಯಾಗುತ್ತಿದ್ದು, ಜನರನ್ನು ಬಲಿಪಡೆಯುತ್ತಿವೆ.

ಕಾಡಾನೆಯ ದಾಳಿಗಳನ್ನು ನಿಯಂತ್ರಿಸಲು ರೈಲ್ವೆ ಕಂಬಿ ಬ್ಯಾರೀಕೇಡ್ ಅಳವಡಿಸುವಂತೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಅರಣ್ಯ ಇಲಾಖೆಯು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಪರಿಣಾಮ ಕಾಡಾನೆಗಳ ದಾಳಿಗೆ ಜೀವಗಳು ಬಲಿಯಾಗುತ್ತಿವೆ. ಕೂಡಲೇ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಬರಬೇಕು, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡುವ ಜತೆಗೆ ಮೃತರ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಬೇಕು, ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಪಟ್ಟುಹಿಡಿದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು