ಮೈಸೂರು

ಎಚ್.ಡಿ.ಕೋಟೆ ವ್ಯಾಪ್ತಿಯಲ್ಲಿ ನಿಲ್ಲದ ಕಾಡಾನೆ ಹಾವಳಿ

ಎಚ್.ಡಿ.ಕೋಟೆ: ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಅರಣ್ಯದಲ್ಲಿರುವ ವನ್ಯ ಪ್ರಾಣಿಗಳು ಅದರಲ್ಲೂ ಕಾಡಾನೆಗಳು ನೀರು ಮೇವು ಅರಸಿಕೊಂಡು ನೇರವಾಗಿ ರೈತರ ಜಮೀನಿಗೆ ನುಗ್ಗಲು ಆರಂಭಿಸಿದ್ದು, ರೈತರು ಆತಂಕದಲ್ಲಿ ದಿನ ಕಳೆಯುವಂತಾಗಿದೆ.

ಈಗಾಗಲೇ ಕಾಡಂಚಿನ ಗ್ರಾಮಗಳಲ್ಲಿ ಮಾನವ ಹಾಗೂ ವನ್ಯಜೀವಿಗಳ ಸಂಘರ್ಷ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಕಾಡಾನೆ, ಹುಲಿ, ಚಿರತೆಗಳ ದಾಳಿಗೆ ರೈತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅರಣ್ಯ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡರೂ ಅರಣ್ಯದಿಂದ ನಾಡಿಗೆ ಬರುವ ವನ್ಯಪ್ರಾಣಿಗಳನ್ನು ನಿಯಂತ್ರಿಸುವುದು ಕಷ್ಟವಾಗಿದೆ.

ಎಚ್.ಡಿ.ಕೋಟೆ ಮತ್ತು ಸರಗೂರು ಅವಳಿ ತಾಲೂಕಿನ ಹಲವು ಗ್ರಾಮಗಳು ಅರಣ್ಯಕ್ಕೆ ಹೊಂದಿಕೊಂಡಂತ ಇರುವುದರಿಂದ ಕಾಡುಪ್ರಾಣಿಗಳ ದಾಳಿಗೆ ಆಗಾಗ್ಗೆ ಜನ ಬಲಿಯಾಗುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಕಬ್ಬೇಪುರ ಹಾಡಿಯ ಅರಣ್ಯ ಇಲಾಖೆ ಗಾರ್ಡ್ ರಾಜು ಎಂಬುವರನ್ನು ಬೆಳ್ಳಂ ಬೆಳಿಗ್ಗೆ ಕರ್ತವ್ಯ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿ ದಾಳಿ ತುಳಿದು ಹತ್ಯೆಗೈದಿತ್ತು.

ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿದ್ದರೂ ಅದನ್ನು ತಡೆಯಲು ಅರಣ್ಯ ಇಲಾಖೆ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳದೇ ಓಬಿರಾಯನ ಕಾಲದ ತಂತ್ರಗಳನ್ನು ಅಳವಡಿಸಿಕೊಂಡು ಅದರಲ್ಲೂ ಆಯ್ದ ಸ್ಥಳಗಳಲ್ಲಿ ಬೆಂಕಿ ಹಾಕಿ ಆನೆ ಕಾವಲು ಕಾಯುವುದು ಮುಂದುವರೆಯುತ್ತಿದೆ.

ಈ ನಡುವೆ ತಾಲೂಕಿನ ಕೆ.ಎಡತೊರೆ ಗ್ರಾಮದ ರೈತ ಗಣೇಶ್ ಮತ್ತು ಇನ್ನಿತರ ರೈತರ ಜಮೀನುಗಳಲ್ಲಿ ಒಂಟಿ ಸಲಗ ಕಳೆದ ಆರೇಳು ದಿನದಿಂದ ಪದೇ ಪದೇ ಕಾಣಿಸಿಕೊಂಡು ರೈತರಲ್ಲಿ ಭಯವನ್ನುಂಟು ಮಾಡಿದೆ. ಈಗಂತೂ ರಾತ್ರಿಯಾಗುತ್ತಿದ್ದಂತೆಯೇ ಜಮೀನುಗಳಿಗೆ ಲಗ್ಗೆ ಇಡುವ ಒಂಟಿ ಆನೆ ಮುಂಜಾನೆ 7 ಗಂಟೆಯಾದರೂ ಜಮೀನು ಬಿಟ್ಟು ಕದಲದ ಪರಿಣಾಮ ಇಲ್ಲಿನ ರೈತರು ತಮ್ಮ ಹೊಲದಲ್ಲಿ ಈಗಷ್ಟೇ ನಾಟಿ ಮಾಡಿರುವ ಶುಂಠಿ, ಬಾಳೆ ಸೇರಿದಂತೆ ರಾಗಿ ಜೋಳದ ಬೆಳೆಗಳಿಗೆ ನೀರು ಕಟ್ಟಲು ತೆರಳಲು ಹೆದರುತ್ತಿದ್ದಾರೆ.

ಎಚ್.ಡಿ.ಕೋಟೆ ತಾಲೂಕಿನ ವೀರನಹೊಸಳ್ಳಿ, ಮೇಟಿಕುಪ್ಪೆ ವನ್ಯಜೀವಿ ವಲಯದ ವ್ಯಾಪ್ತಿಯಲ್ಲಿ ಅಣ್ಣೂರು, ಭೀಮನಹಳ್ಳಿ, ಚೊಕ್ಕೋಡನಹಳ್ಳಿ, ಮೇಟಿಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅನೇಕ ಗ್ರಾಮಗಳು ಕಾಡಂಚಿನ ಗ್ರಾಮಗಳಾಗಿದ್ದು, ಇಲ್ಲಿನ ರೈತರು ಕಷ್ಟಪಟ್ಟು ವ್ಯವಸಾಯ ಮಾಡಿದರೂ, ಬೆಳೆಗಳ ರಕ್ಷಣೆಗೆ ದೊಡ್ಡ ಸವಾಲು ಎನಿಸಿದೆ, ಆನೆ ಹಾವಳಿ ತಡೆಗೆ ವೈಜ್ಞಾನಿಕ ಟ್ರಂಚ್ ನಿರ್ಮಾಣದ ಜತೆಗೆ ವನ್ಯಜೀವಿ ವಲಯದಿಂದ ಕಾಡಾನೆಗಳು ಹೊರಗಡೆ ಬಾರದಂತೆ ರೈಲು ಕಂಬಿ ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ತಾಲೂಕಿನ ಕಾಡಂಚಿನ ಗ್ರಾಮದ ರೈತರು ಅರಣ್ಯ ಇಲಾಖೆ ಮತ್ತು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

ಇನ್ನಾದರೂ ರೈತರು ಕೂಗಿಗೆ ಮನ್ನಣೆ ನೀಡಿ, ಕಾಡಾನೆ ಹಾವಳಿ ತಡೆಗೆ ಶ್ರಮಿಸದ ಅಧಿಕಾರಿಗಳ ಮೇಲೆ ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ ಇಲಾಖೆ ಮೇಲಾಧಿಕಾರಿಗಳು ಕಠಿಣ ಕ್ರಮಕೈಗೊಂಡು, ವೈಜ್ಞಾನಿಕ ರೀತಿಯಲ್ಲಿ ಆನೆ ಕಾವಲು ಗಸ್ತು ಹೆಚ್ಚಿಸಿ ನಿರಂತರವಾಗಿ ರೈತರ ಜಮೀನುಗಳಿಗೆ ಲಗ್ಗೆ ಇಟ್ಟು ಬೆಳೆ ನಾಶದ ಜತೆಗೆ ಮಾನವನ ಜೀವಕ್ಕೆ ಎರವಾಗುತ್ತಿರುವ ಕಾಡಾನೆ ಹಾವಳಿಯನ್ನು ನಿಯಂತ್ರಿಸಿ ತಾಲೂಕಿನ ರೈತರು ತಮ್ಮ ಹೊಲ, ಗದ್ದೆಗಳಲ್ಲಿ ನಿರ್ಭೀತಿಯಿಂದ ಕೆಲಸ ಕಾರ್ಯದಲ್ಲಿ ತೊಡಗಲು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಶ್ರಮಿಸಬೇಕಿದೆ.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago