News Karnataka Kannada
Tuesday, April 30 2024
ಮೈಸೂರು

ಸಮಾವೇಶ ನಡೆದ ಜಾಗದಲ್ಲಿ ಕಸ ತೆಗೆದ ಯದುವೀರ್‌ ಒಡೆಯರ್‌ ದಂಪತಿ

ಬಿಜೆಪಿಯ ಲೋಕಸಭಾ ಅಭ್ಯರ್ಥಿ ಯದುವೀರ್‌ ಒಡೆಯರ್‌ ಮಹಾರಾಜ ಕಾಲೇಜು ಮೈದಾನದ ವಿಜಯ ಸಂಕಲ್ಪ ಸಮಾವೇಶ ನಡೆದ ಜಾಗದಲ್ಲಿ ಕಸ ತೆಗೆದಿದ್ದಾರೆ.
Photo Credit : NewsKarnataka

ಮೈಸೂರು:  ಬಿಜೆಪಿಯ ಲೋಕಸಭಾ ಅಭ್ಯರ್ಥಿ ಯದುವೀರ್‌ ಒಡೆಯರ್‌ ಮಹಾರಾಜ ಕಾಲೇಜು ಮೈದಾನದ ವಿಜಯ ಸಂಕಲ್ಪ ಸಮಾವೇಶ ನಡೆದ ಜಾಗದಲ್ಲಿ ಕಸ ತೆಗೆದಿದ್ದಾರೆ.

ಭಾನುವಾರ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಯದುವೀರ್‌ ಒಡೆಯರ್‌ ಪರವಾಗಿ ಪ್ರಧಾನಿ ನರೇಂದ್ರ ಮೋದಿ  ಮತ್ತು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ  ಪ್ರಚಾರ ನಡೆಸಿದ್ದರು.

ಕಾರ್ಯಕ್ರಮದಲ್ಲಿ ಬಿಜೆಪಿ-ಜೆಡಿಎಸ್‌ನ  ಸುಮಾರು 60 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದ್ದರು.

ಇಂದು ಬೆಳಗ್ಗೆ ಮೈದಾನದಲ್ಲಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಯದುವೀರ್ ಹಾಗೂ ಪತ್ನಿ ತ್ರಿಷಿಕಾ ಅವರು ಮಾಸ್ಕ್‌ ಧರಿಸಿ ಬಿದ್ದಿದ್ದ ಕಸವನ್ನು  ತೆಗೆದಿದ್ದಾರೆ.

ಈ ಮೂಲಕ ನಾನು ಮಹಾರಾಜ ಅಲ್ಲ ಸಾಮಾನ್ಯ ಪ್ರಜೆ ಎಂಬುದನ್ನು ಸಾಬೀತು ಪಡಿಸಿದರು. ಯದುವೀರ್‌ಗೆ ಸ್ಥಳೀಯರು ಸಾಥ್‌ ನೀಡಿದರು.

ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಯಡಿಯೂರಪ್ಪ, ಕುಮಾರಸ್ವಾಮಿ ಸೇರಿದಂತೆ ಬಿಜೆಪಿ, ಜೆಡಿಎಸ್‌ ನಾಯಕರು ಭಾಗವಹಿಸಿ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು