News Karnataka Kannada
Friday, May 03 2024
ಮೈಸೂರು

ನೀರಿನಲ್ಲಿ ಮುಳುಗಿ ಯುವಕ ಸಾವು: ನಾಲ್ವರ ವಿರುದ್ಧ ದೂರು ದಾಖಲು

ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಸಮೀಪದಲ್ಲಿರುವ ಹತ್ವಾಳ್ ಕಟ್ಟೆಯಲ್ಲಿ ಇಂದು ಶನಿವಾರ ನಡೆದಿದೆ.
Photo Credit : NewsKarnataka

ನಂಜನಗೂಡು: ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಸಮೀಪದಲ್ಲಿರುವ ಹತ್ವಾಳ್ ಕಟ್ಟೆಯಲ್ಲಿ ಇಂದು ಶನಿವಾರ ನಡೆದಿದೆ.

ನಂಜನಗೂಡು ತಾಲ್ಲೂಕಿನ ಮಲ್ಕುಂಡಿ ಗ್ರಾಮದ ನಂದೀಶ್ ಎಂಬುವವರ ಪುತ್ರ 20 ವರ್ಷದ ವಿನಯ್ ಮೃತ ದುರ್ದೈವಿಯಾಗಿದ್ದಾನೆ.

ಯುವಕನೊಂದಿಗೆ ತೆರಳಿದ ನಾಲ್ವರ ವಿರುದ್ಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಏಪ್ರಿಲ್ 4 ರಂದು ಮಲ್ಕುಂಡಿ ಗ್ರಾಮದಲ್ಲಿ ಪೂಜೆ ಮಾಡುವ ವಿಚಾರಕ್ಕೆ ಗಲಾಟೆ ನಡೆದಿತ್ತು. ಇದಕ್ಕೆ ಗ್ರಾಮದಲ್ಲಿ ನ್ಯಾಯ ಪಂಚಾಯಿತಿಯನ್ನು ಮಾಡಲಾಗಿತ್ತು.

ಆದರೆ, ಶನಿವಾರ ವಿನಯ್ ಎಂಬಾತನನ್ನು ತನ್ನ ನಾಲ್ವರು ಸ್ನೇಹಿತರು ಬೈಕ್ ನಲ್ಲಿ ಹತ್ವಾಳ್ ಕಟ್ಟೆಗೆ ಕರೆದುಕೊಂಡು ಹೋಗಿದ್ದಾರೆ. ಸೋಮಶೇಖರ್, ಮನು, ದಿನೇಶ್, ವಿಜಯ್ ಎಂಬುವವರು ನನ್ನ ಮಗನಾದ ವಿನಯ್ ನನ್ನು ನೀರಿಗೆ ತಳ್ಳಿ ಸಾಯಿಸಿದ್ದಾರೆ ಎಂದು ನಾಲ್ವರ ವಿರುದ್ಧ ಕಾನೂನು ರೀತಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಮೃತ ಯುವಕನ ತಂದೆ ನಂದೀಶ್ ದೂರು ನೀಡಿದ್ದಾರೆ.

ದೂರು ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಮತ್ತೊರ್ವ ಯುವಕ ನಾಪತ್ತೆಯಾಗಿದ್ದಾನೆ.

ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು