News Karnataka Kannada
Monday, May 06 2024
ಮೈಸೂರು

ನಂಜನಗೂಡು: ತವರಿಗೆ ಆಗಮಿಸುತ್ತಿರುವ ಸಿಎಂ ಸಿದ್ದರಾಮಯ್ಯ

Chief Minister Siddaramaiah arrives at his home
Photo Credit : News Kannada

ನಂಜನಗೂಡು: ಇನ್ನೂ ಕೆಲವೇ ಕ್ಷಣಗಳಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿಗೆ ಆಗಮಿಸಲಿದ್ದಾರೆ.

ನಂಜನಗೂಡು ತಾಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ಬೃಹತ್ ಕೃತಜ್ಞತಾ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ವರುಣ ವಿಧಾನಸಭಾ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ. ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ತವರು ಕ್ಷೇತ್ರಕ್ಕೆ ಕಾಲಿಡುತ್ತಿದ್ದಾರೆ.

20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆಯಿದ್ದು, ತಂಡೋಪತಂಡವಾಗಿ ವರುಣ ಕ್ಷೇತ್ರದ ಜನತೆ ಆಗಮಿಸುತ್ತಿದ್ದಾರೆ.

ಕಾರ್ಯಕ್ರಮಕ್ಕೆ ಆಗಮಿಸುವ ಮತದಾರರಿಗೆ ತಿಂಡಿ, ಊಟದ ವ್ಯವಸ್ಥೆ ಮಾಡಲಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ, ವೆಂಕಟೇಶ್, ಸತೀಶ್ ಜಾರಕಿಹೊಳಿ, ಎಂ.ಬಿ ಪಾಟೀಲ್, ಡಾ. ಜಿ. ಪರಮೇಶ್ವರ್, ಸ್ಥಳೀಯ ಕಾಂಗ್ರೆಸ್ ಶಾಸಕರು ಆಗಮಿಸುವ ಸಾಧ್ಯತೆ ಇದೆ.

ಇನ್ನೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು