ನಂಜನಗೂಡು: ತಾಲೂಕಿನ ಅಳಗಂಚಿಪುರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಟೇಪ್ ಕತ್ತರಿಸುವ ಮೂಲಕ ಉದ್ಘಾಟನೆ ಮಾಡಿದರು.
ಬಳಿಕ ಮಾತನಾಡಿದ ಅವರು, ಐಟಿಸಿ ಕಂಪನಿ ವತಿಯಿಂದ ನೂತನವಾಗಿ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟನೆ ಮಾಡಲಾಗಿದೆ.
ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸಿ, ನೀರನ್ನು ಉಳಿಸಿ ಎಂದರು. ಇನ್ನು ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಿದ್ದೇವೆ ಮಳೆಗಾಲ ಬರುವ ತನಕ ನೀರಿಗೆ ತೊಂದರೆ ಬರಬಹುದು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು ಪಕ್ಷದ ಮುಖಂಡರು, ಕಂಪನಿಯ ಪ್ರತಿನಿಧಿಗಳು ಭಾಗವಹಿಸಿದರು .