ನಂಜನಗೂಡು: ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಬಳಿ ಸಾಮಾಜಿಕ ಅಧಿಕಾರಿತ ಶಿಬಿರ ಹಾಗೂ ವಿಶೇಷ ಚೇತನರಿಗೆ ಉಚಿತ ಸಾಧನ ಸಲಕರಣೆಗಳ ಸಮರ್ಪಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಉದ್ಘಾಟನೆ ಮಾಡಿದರು.
ಬಳಿಕ ಮಾತನಾಡಿದ ಅವರು, ಚಾಮರಾಜನಗರ ಲೋಕಸಭಾ ಸದಸ್ಯರಾದ ವಿ ಶ್ರೀನಿವಾಸ್ ಪ್ರಸಾದ್ ರವರು ಮಾನವೀಯತೆಯನ್ನು ಮೆರೆದಿದ್ದಾರೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಇಂತಹ ಕಾರ್ಯಕ್ರಮಗಳನ್ನು ನಡೆಸಿ ಅಭಿವೃದ್ಧಿಯ ಕನಸು ಕಾಣುತ್ತಿದ್ದಾರೆ. ಆ ಕನಸನ್ನು ನಾವು ನನಸು ಮಾಡುತ್ತೇವೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗಳಿಗೆ ಹೆಸರುಗಳನ್ನು ಹಾಕಿಕೊಂಡು ನಾವು ಮಾಡಿದ್ದೇವೆ ಎಂದು ಬೀಗುತ್ತಾರೆ ಎಂದು ವಿರೋಧ ಪಕ್ಷದವರಿಗೆ ಟಾಂಗ್ ನೀಡಿದರು.
1500 ವಿಶೇಷ ಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸುತಿದ್ದೇವೆ. ಮುಂದಿನ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮವನ್ನು ಮಾಡುತ್ತೇವೆ. ವಿಕಲಚೇತನರಿಗಾಗಿ 500 ಕೋಟಿ ರೂ. ಮೀಸಲು ಇಡಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾನ ಹಕ್ಕುಗಳಿವೆ ಅದನ್ನು ಎಲ್ಲರು ಪಡೆದುಕೊಳ್ಳಬೇಕು. ಹಿಂದುಳಿದ ನಂಜನಗೂಡಿನಲ್ಲಿ ಸಮುದಾಯಗಳಿಗೆ ಭವನಗಳನ್ನು ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಾಗುತ್ತದೆ. ಶಾಸಕ ಬಿ ಹರ್ಷವರ್ಧನ್ ರವರು ಒಳ್ಳೆಯ ಪ್ರಾಮಾಣಿಕವಾಗಿ ಕೆಲಸಗಳನ್ನು ಅವರಿಗೆ ಜನರು ಆಶೀರ್ವಾದ ಮಾಡಿ ಎಂದರು. ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಸಂಸದ ವಿ ಶ್ರೀನಿವಾಸ ಪ್ರಸಾದ್, ಶಾಸಕ ಬಿ ಹರ್ಷವರ್ಧನ್, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್ ಮಹದೇವಯ್ಯ, ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಶಿವಣ್ಣ, ನಗರಸಭಾಧ್ಯಕ್ಷ ಮಹದೇವಸ್ವಾಮಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಸೇರಿದಂತೆ ಹಲವಾರು ಭಾಗವಹಿಸಿದ್ದರು.
ಮುಖ್ಯಮಂತ್ರಿ ಆಗಮನ ಹಿನ್ನೆಲೆ ಕಪ್ಪು ಬಾವುಟ ಪ್ರದರ್ಶನ
ನಂಜನಗೂಡಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಆಗಮನ ಹಿನ್ನೆಲೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ದಸಂಸ ಮುಖಂಡರ ಬಂಧನ. ನಂಜನಗೂಡಿನ ಅಂಬೇಡ್ಕರ್ ವೃತ್ತದಲ್ಲಿ ಘಟನೆ. ದಸಂಸ ಜಿಲ್ಲಾ ಸಂಚಾಲಕ ಮಲ್ಲಹಳ್ಳಿ ನಾರಾಯಣ್, ಜನ ಸಂಗ್ರಾಮ ಪರಿಷತ್ ರಾಜ್ಯಾಧ್ಯಕ್ಷ ನಗರ್ಲೆ ಎಂ ವಿಜಯಕುಮಾರ್ ಇಬ್ಬರ ಬಂಧನ.
ಸಾಮಾಜಿಕ ಅಧಿಕಾರಿತಾ ಶಿಬಿರ ಹಾಗೂ ವಿಕಲಚೇತನರಿಗೆ ಉಚಿತ ಸಾಧನ ಸಲಕರಣೆಗಳ ಸಮರ್ಪಣೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಮುಖ್ಯ ಮಂತ್ರಿ ಬಸವರಾಜ ಬೊಮ್ಮಯಿ. ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಬಳಿ ನಡೆಯುತ್ತಿರುವ ಕಾರ್ಯಕ್ರಮ. ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ಇಬ್ಬರನ್ನು ಬಂಧಿಸಲಾಗಿದೆ.