News Karnataka Kannada
Wednesday, May 01 2024
ಮೈಸೂರು

ನಂಜನಗೂಡು: ದರ್ಶನ್ ಧ್ರುವಗೆ ಟಿಕೆಟ್ ನೀಡುವಂತೆ ಕೈ ಕಾರ್ಯಕರ್ತರ ಒತ್ತಾಯ

Hand activists demand ticket for Darshan Dhruva
Photo Credit : News Kannada

ನಂಜನಗೂಡು: ತಾಲೂಕಿನ ದೊಡ್ಡ ಕವಲಂದೆ ಗ್ರಾಮದಲ್ಲಿ ಆರ್ ಧ್ರುವ ನಾರಾಯಣ್ ರವರ ಶ್ರದ್ಧಾಂಜಲಿ ಸಭೆಯನ್ನು ಕಾಂಗ್ರೆಸ್ ಪಕ್ಷದಿಂದ ಆಯೋಜನೆ ಮಾಡಲಾಗಿತ್ತು.

ಆರ್.ಧ್ರುವ ನಾರಾಯಣ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೌನಾಚರಣೆ ಮಾಡಿ ಶ್ರದ್ಧಾಂಜಲಿಯನ್ನು ಮಾಡಿದರು.

ಬಳಿಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್ ಮಾತನಾಡಿ, ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಿರುವ ಏಕೈಕ ಜನಪ್ರತಿನಿಧಿ ಧ್ರುವನಾರಾಯಣ್ ರವರು ನಮ್ಮ ಬಿಟ್ಟು ಹೋಗಿಲ್ಲ ನಮ್ಮಲ್ಲೇ ಇದ್ದಾರೆ. ಯಾವುದೇ ಕಪ್ಪು ಚುಕ್ಕಿ ಇಲ್ಲದೆ ರಾಜಕಾರಣ ಮಾಡಿ ದೇಶದಲ್ಲಿ ಅತ್ಯುತ್ತಮ ಸಂಸದ ಎಂದು ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅವರ ಹಾದಿಯಲ್ಲಿ ನಾವು ಸಾಗಬೇಕಾಗಿತ್ತು. ಮುಂದಿನ ಹಂಚಿನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಅವರ ಪುತ್ರ ದರ್ಶನ್ ಧ್ರುವನಾರಾಯಣ್ ರವರಿಗೆ ಟಿಕೆಟ್ ನೀಡಿ ನಂಜನಗೂಡು ಅಭಿವೃದ್ಧಿಗೆ ನಾವು ನಿಲ್ಲುತ್ತೇವೆ ಎಂದು ಹೇಳಿದರು.
ಇನ್ನು ಸಭೆಯಲ್ಲಿ ಕೈ ಕಾರ್ಯಕರ್ತರು ದರ್ಶನ್ ಧ್ರುವನಾರನಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಧ್ರುವನಾರಾಯಣ್ ರವರ ಆಪ್ತ ಸಹಾಯಕ ನಾಗೇಶ್, ಕಾಂಗ್ರೆಸ್ ಮುಖಂಡರಾದ ದಾಸನೂರು ನಾಗೇಶ್, ದೊರೆಸ್ವಾಮಿ, ನಾಯಕ, ಪುಟ್ಟ ಲಿಂಗಶೆಟ್ಟಿ. ಗ್ರಾಮ ಪಂಧ್ಯಕ್ಷ ಶಂಕರ್ ನಾಯಕ್ ಗ್ರಾಮ ಪಂಚಾಯಿತಿ ಸದಸ್ಯರಾದ ನಸರುಲ್ಲಾ ಖಾನ್, ಮಹದೇವಯ್ಯ, ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು