ನಂಜನಗೂಡು: ತಾಲೂಕಿನ ಒಡೆಯನಪುರ ಗ್ರಾಮದಲ್ಲಿ ದಾನಗಾಹಿ ಮೇಲೆ ಹುಲಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ರೈತರು ಅರುಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹೆಡಿಯಾಲ ಅರಣ್ಯ ವ್ಯಾಪ್ತಿಯ ಒಡೆಯನಪುರ , ಹಾದನೂರು, ನಾಗನಪುರ, ಬಳ್ಳೂರು ಹುಂಡಿ, ಕಾಡಂಚಿನ ಪ್ರದೇಶದಲ್ಲಿ ವನ್ಯಜೀವಿಗಳು ನಾಡಿಗೆ ಬರದಂತೆ ತಂತಿ ಬೇಲಿ ನಿರ್ಮಿಸಿಕೊಡಿ ಎಂದು ಕಾಡಂಚಿನ ಪ್ರದೇಶದ ಗ್ರಾಮದ ಮುಖಂಡರು ಬೇಡಿಕೊಂಡರು. ಯಾವುದೇ ಪ್ರಯೋಜನವಾಗಿಲ್ಲ. ರೈತರು ಬೆಳೆದ ಫಸಲನ್ನು ಕಾಡು ಪ್ರಾಣಿಗಳು ದಾಳಿ ಮಾಡಿ ನಾಶ ಮಾಡುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಗ್ರಾಮಸ್ಥರು ಆರೋಪ ಮಾಡಿದರು.
ದನಗಾಹಿ ವಿಷಕಂಠ ಎಂಬ ವ್ಯಕ್ತಿಗೆ ಹುಲಿ ದಾಳಿ ಮಾಡಿ, ಗಾಯಗೊಳಿಸಿದೆ. ಅವರನ್ನ ಆಸ್ಪತ್ರೆಗೆ ಸೇರಿಸಿದರು ಚಿಕಿತ್ಸೆ ವೆಚ್ಚವನ್ನು ಬರಿಸದೆ ಇಲಾಖೆಯ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಶಾಸಕ ದರ್ಶನ್ ಧ್ರುವ ನಾರಾಯಣ್ ಭೇಟಿ ನೀಡಿ, ವ್ಯಕ್ತಿಗೆ ಸೂಕ್ತ ಪರಿಹಾರ ಮತ್ತು ಚಿಕಿತ್ಸೆ ವೆಚ್ಚವನ್ನು ಬರಿಸುವಂತೆ ಹೇಳಿದರು ಯಾವುದೇ ಪ್ರಯೋಜನವಾಗಿಲ್ಲ. ಗಾಯಗೊಂಡ ವ್ಯಕ್ತಿಯನ್ನು ಡಿಸ್ಚಾರ್ಜ್ ಮಾಡಿ ಕಳುಹಿಸಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಗೆ ಅಧಿಕಾರಿಗಳಿಗೆ ತಿಳಿಸಿದರು ಉಡಾಫೆಯಿಂದ ಉತ್ತರಿಸುತ್ತಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕೂಡಲೇ ಗಾಯಗೊಂಡ ವ್ಯಕ್ತಿಗೆ ಚಿಕಿತ್ಸೆ ವೆಚ್ಚವನ್ನು ಬರಿಸಬೇಕು, ಕಾಡು ಪ್ರಾಣಿಗಳ ಹಾವಳಿಯನ್ನು ತಪ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.