ನಂಜನಗೂಡು: ನಗರದ ಶ್ರೀ ನೀಲಕಂಠೇಶ್ವರ ಶಾಲೆಯಲ್ಲಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ 139ನೇ ಜಯಂತೋತ್ಸವ ಕಾರ್ಯಕ್ರಮವನ್ನು
ನಂಜನಗೂಡು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇವರ ವತಿಯಿಂದ ಆಯೋಜನೆ ಮಾಡಲಾಗಿತ್ತು.
ಶ್ರೀ ನೀಲಕಂಠೇಶ್ವರ ಶಾಲೆಯ ಅಧ್ಯಕ್ಷ ಕೆ.ಎಸ್ ಅರುಣೇಶ್ ಜಯಂತೋತ್ಸವವನ್ನು ಉದ್ಘಾಟಿಸಿದರು. ಬಳಿಕ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಚಿಕ್ಕ ರಂಗನಾಯಕ ಮಾತನಾಡಿ, ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ. ಕೆಆರ್ಎಸ್ ಅಣೆಕಟ್ಟು ನಿರ್ಮಿಸಲು ಅರಮನೆಯಲ್ಲಿದ್ದ ಚಿನ್ನಾಭರಣ ಮಾರಾಟ ಮಾಡಿ ಕಟ್ಟಿಸಿದರು.
ಯುವರಾಜ ಕಾಲೇಜು, ಮಹಿಳಾ ವಿಜ್ಞಾನ ಕಾಲೇಜು, ಬ್ಯಾಂಕ್ ಸ್ಥಾಪನೆ, ಕೆಆರ್ ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆ, ವಿಶ್ವದಲ್ಲಿಯೇ ಮೊಟ್ಟಮೊದಲ ಬಾರಿಗೆ ಜಲ ವಿದ್ಯುತ್ ಸ್ಥಾಪನೆ. ಕಬ್ಬಿನ ಮತ್ತು ಉಕ್ಕಿನ ಕಾರ್ಖಾನೆ, ಮೈಸೂರು ವಿಶ್ವವಿದ್ಯಾನಿಲಯ, ಮಹಾರಾಜ ಮತ್ತು ಮಹಾರಾಣಿ ಕಾಲೇಜು ಸ್ಥಾಪನೆ ಮಾಡಿದ್ದರು. ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಬೇಕು ಎಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಹೇಳಿದ್ದರು.
ಹಿಂದುಳಿದವರಿಗೆ ಮೊದಲಿಗೆ ಮೀಸಲಾತಿಯನ್ನು ಕಲ್ಪಿಸಿದ್ದರು. ರಾಜರುಗಳು ಯುದ್ಧವನ್ನು ಮಾಡುತ್ತಿದ್ದರು ಆದರೆ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಜನಪರ ಕೆಲಸಗಳನ್ನು ಮಾಡಿ ಇನ್ನು ಜನರ ಮನಸ್ಸಲ್ಲಿ ಜೀವಂತವಾಗಿರುವ ಮಹಾರಾಜರು ಎಂದು ಬಣ್ಣಿಸಿದರು.
ಇನ್ನೂ ವಿದ್ಯಾರ್ಥಿಗಳಿಂದ ಭರತನಾಟ್ಯ ಹಾಗೂ ಲಘು ಗಾಯನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಲತಾ ಮುದ್ದು ಮೋಹನ್, ಸಾಹಿತಿ ಕೊತ್ತಲವಾಡಿ ಶಿವಕುಮಾರ್, ನಗರಸಭಾ ಸದಸ್ಯ ಶ್ವೇತ ಲಕ್ಷ್ಮಿ, ಶ್ರೀಕಂಠೇಶ್ವರ ಶಾಲೆಯ ಕಾರ್ಯದರ್ಶಿ ಕುಮಾರಸ್ವಾಮಿ, ಗೌರವ ಕಾರ್ಯದರ್ಶಿ ಮಂಜುನಾಥ್, ಗೌರವ ಕೋಶಾಧ್ಯಕ್ಷ ರಂಗಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…