ನಂಜನಗೂಡು: ಸುಂಟರಗಾಳಿಗೆ ಮನೆ ಮತ್ತು ಅಂಗಡಿಗಳ ಮೇಲ್ಚಾವಣಿ ಹಾರಿ ಹೋಗಿರುವ ಘಟನೆ ನಂಜನಗೂಡು ತಾಲೂಕಿನ ಗೆಜ್ಜಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಾತ್ರಿಯ ಸಮಯದಲ್ಲಿ ಬಿರುಗಾಳಿಯ ಸುಂಟರಗಾಳಿಗೆ ಸುಮಾರು ಐದು ಮನೆಗಳು ಮತ್ತು ಅಂಗಡಿಗಳ ಮೇಲ್ಚಾವಣಿ ಮುರಿದು ಬಿದ್ದಿವೆ. ಗ್ರಾಮದ ನಿಂಗರಾಜು, ಚೆಲುವರಾಯ, ನಂಜುಂಡೇಗೌಡ, ಸಿದ್ದಾಚಾರಿ, ಸಿದ್ದಮ್ಮ, ರಾಜೇಶ್ ಸೇರಿದಂತೆ ಸುಮಾರು ಐದು ಮನೆಗಳ ಮೇಲ್ಚಾವಣಿ ಹಾರಿ ಹೋಗಿ ಗೋಡೆಗಳು ಕುಸಿದು ಬಿದ್ದಿವೆ. ಅಂಗಡಿಯಲ್ಲಿದ್ದೆ ದವಸ ಧಾನ್ಯಗಳು ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಯಾಗಿದ್ದು ಸುಮಾರು 10 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ವಿಷಯ ತಿಳಿದ ಸ್ಥಳಕ್ಕೆ ತಾಯೂರು ಗ್ರಾಮ ಪಂಚಾಯಿತಿಯ ಸದಸ್ಯರಾದ ವಿಟ್ಟಲ್, ಶಿವಣ್ಣ, ರಾಜೇಶ್, ಸ್ವಾಮಿ ಅಂಕಶಟ್ಟಿ, ಬಂಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಷ್ಟ ಅನುಭವಿಸಿದ ನಿವಾಸಿಗಳಿಗೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದರು. ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಸೂಕ್ತ ಪರಿಹಾರವನ್ನು ನೀಡುತ್ತೇವೆ ಎಂದು ಗ್ರಾಮ ಪಂಚಾಯತಿಯ ಸದಸ್ಯರುಗಳು ಭರವಸೆ ನೀಡಿದರು.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…