ನಂಜನಗೂಡು: ತಾಲೂಕಿನ ನಗರ್ಲೆ ಗ್ರಾಮದಲ್ಲಿ ಆರ್. ಧ್ರುವನಾರಾಯಣ್ ರವರ ನುಡಿ ನಮನ ಕಾರ್ಯಕ್ರಮವನ್ನು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿದರು.
ಜನಸಂಗ್ರಾಮ ಪರಿಷತ್ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಯುವಕರ ಸಂಘದ ನಗರ್ಲೆ ಮತ್ತು ಧ್ರುವ ನಾರಾಯಣ್ ಅಭಿಮಾನಿಗಳ ಬಳಗದಿಂದ ಆಯೋಜನೆ ಮಾಡಲಾಗಿದ್ದ ನುಡಿ ನಮನ ಕಾರ್ಯಕ್ರಮದಲ್ಲಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿದರು.
ಧ್ರುವ ನಾರಾಯಣ್ ಅವರನ್ನು ಕಳೆದುಕೊಂಡು ಕಾಂಗ್ರೆಸ್ ಪಕ್ಷ ಬಡಪಾಯಿಯಾಗಿದೆ. ರಾಜಕೀಯದಲ್ಲಿ ತಮ್ಮದೇ ಆದ ಚಾಪನ್ನು ಮೂಡಿಸಿದರು ಶಾಸಕರಾಗಿ ಸಂಸದರಾಗಿ ಉತ್ತಮ ಸೇವೆ ಸಲ್ಲಿಸಿದರು ಸಂತೆಮರಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ ಒಂದು ಮತದಿಂದ ಗೆದ್ದು ಒಂದು ಮತದ ಬೆಲೆಯನ್ನು ತಿಳಿಸಿಕೊಟ್ಟವರು ಹಾಗೂ ದಕ್ಷಿಣ ಕರ್ನಾಟಕದಲ್ಲಿ ಅತ್ಯುತ್ತಮ ಸಂಸದ ಎಂದು ಪ್ರಶಸ್ತಿ ಪಡೆದು ಸಂಸದರಿಗೆ ಮಾದರಿಯಾಗಿದ್ದವರು ಆದರೆ ಇಂದು ನಮ್ಮನ್ನೆಲ್ಲ ಅಗಲಿದ್ದಾರೆ ಅವರ ಕುಟುಂಬಕ್ಕೆ ಈ ದುಃಖವನ್ನು ತಡೆಯುವ ಶಕ್ತಿ ನೀಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಜನಸಂಗ್ರಾಮ ಪರಿಷತ್ ರಾಜ್ಯಾಧ್ಯಕ್ಷ ನಗರ್ಲೆ ಎಂ. ವಿಜಯಕುಮಾರ್, ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.