ನಂಜನಗೂಡು: ತಾಲೂಕಿನ ಸೂರಹಳ್ಳಿ ಗ್ರಾಮದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಗೆ ಎರಡು ಮನೆಗಳು ಕುಸಿದು ಬಿದ್ದಿವೆ. ಮನೆಯಲ್ಲಿದ್ದ ಗರ್ಭಿಣಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗ್ರಾಮದ ರಾಜು ನಾಯಕ ಮತ್ತು ಮಹದೇವಮ್ಮ ಎಂಬುವವರಿಗೆ ಸೇರಿದ ಮನೆಗಳಾಗಿದ್ದು, ಕಳೆದ ಎರಡು ಮೂರು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ರಾಜು ನಾಯಕ ಎಂಬುವವರ ಮನೆಯ ಗೋಡೆ ಕುಸಿದು ಮಹದೇವಮ್ಮ ಎಂಬುವರ ಮನೆ ಮೇಲೆ ಬಿದ್ದಿದೆ. ಮನೆಯಲ್ಲಿದ್ದ ದವಸ ಧಾನ್ಯಗಳು ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಯಾಗಿದ್ದು, ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ವಿಷಯ ತಿಳಿದ ಸ್ಥಳಕ್ಕೆ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಪದಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಧಿಕಾರಿಗಳಿಗೆ ಕರೆ ಮಾಡಿದ್ದಾರೆ ಯಾವುದೇ ರೀತಿ ಸ್ಪಂದಿಸುತ್ತಿಲ್ಲ. ಕೂಡಲೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮನೆ ಕಳೆದುಕೊಂಡ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ರೈತರು ಒತ್ತಾಯಿಸಿದರು