ನಂಜನಗೂಡು : ಬೆಳ್ಳಂಬೆಳಗ್ಗೆ ನಂಜನಗೂಡಿನಲ್ಲಿ ಜೆಸಿಬಿ ಘರ್ಜಿಸಿದೆ. ನಂಜನಗೂಡು ತಾಲ್ಲೂಕಿನ ಕಸಬಾ ಹೋಬಳಿಯ ಚಾಮಲಾಪುರ ಸರ್ವೆ ನಂ. 203, 204, 205, ಜಮೀನಿಗೆ ಸಂಬಂಧಿಸಿದ ಸರ್ಕಾರಿ ರಸ್ತೆಯನ್ನು ಒತ್ತುವರಿ ಮಾಡಿಕೊಂಡವರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಬಿಸಿ ಮುಟ್ಟಿಸಿದ್ದಾರೆ.
ಮಾನ್ಯ ತಹಶೀಲ್ದಾರ್ ಆದೇಶದ ಮೇರೆಗೆ ನಂಜನಗೂಡು ನಗರಸಭೆ ಕಮಿಷನರ್ ನಂಜುಂಡಸ್ವಾಮಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ತೆರುವು ಕಾರ್ಯಾಚರಣೆ ನಡೆದಿದೆ. ಒತ್ತುವರಿ ಮಾಡಿಕೊಂಡ ಜಮೀನು ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಅಕ್ರಮವಾಗಿ ನಿರ್ಮಿಸಲಾಗಿದ್ದ ಬೇಲಿಯನ್ನು ಜೆಸಿಬಿ ಯಂತ್ರದ ಮೂಲಕ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯಲ್ಲಿ ತೆರುವುಗೊಳಿಸಿದ್ದಾರೆ.

