ವರುಣಾ: ತಾಲೂಕು ಕೇಂದ್ರವಾಗಬೇಕೆಂದು ಜನ ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾವು ಅಧಿಕಾರಕ್ಕೆ ಬಂದರೆ ವರುಣಾ ಕ್ಷೇತ್ರವನ್ನು ತಾಲ್ಲೂಕು ಮಾಡುತ್ತೇವೆ ಎಂದು ಹೇಳಿದ್ದರು.
ಇದನ್ನು ಜನ ಕೇಳಿಲ್ಲ. ವರುಣಾ ಕ್ಷೇತ್ರದಲ್ಲಿ ನಾನು ಮೂರು ದಿನ ಪ್ರಚಾರ ಮಾಡಿದ್ದೇನೆ ಎಲ್ಲಿಯೂ ಜನ ಕೇಳಿಲ್ಲ. ಬಸವರಾಜ ಬೊಮ್ಮಾಯಿ ಕೇಳಿದ ತಕ್ಷಣ ಇದನ್ನು ಮಾಡುವುದಿಲ್ಲ. ವರುಣಾ ಕ್ಷೇತ್ರದ ಜನ ಕೇಳಿದರೆ ಮಾಡುತ್ತೇವೆ ಎಂದರು.