ಮೈಸೂರು: ಹಾಲು ಉತ್ಪಾದಕರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸರಕಾರದಿಂದ ಐದು ರೂ. ಹೆಚ್ಚುವರಿಯಾಗಿ ನೀಡಲು ಸರಕಾರ ಚಿಂತನೆ ನಡೆಸಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ಮೈಸೂರಿನಲ್ಲಿ ಶನಿವಾರ ಸಹಕಾರ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಾಲು ಉತ್ಪಾದಕರಿಂದ ಖರೀದಿಸಿದ ಹಾಲಿಗೆ ಹಣ ನೀಡುವುದರೊಂದಿಗೆ ಸರಕಾರ ಹೆಚ್ಚುವರಿಯಾಗಿ 5ರೂ. ಪ್ರೋತ್ಸಾಹ ಧನ ನೀಡುತ್ತಿದೆ. ಆದರೂ ರೈತರಿಗೆ ಹೈನುಗಾರಿಕೆ ವೆಚ್ಚ ಹೆಚ್ಚಾಗಿರುವ ಹಿನ್ನಲೆಯಲ್ಲಿ ಮತ್ತೆ ಪ್ರತಿ ಲೀಟರ್ ಹಾಲಿಗೆ 5 ರೂ. ನೀಡುವ ಬಗ್ಗೆ ಯೋಜನೆ ಇದ್ದು, ಈ ಬಗ್ಗೆ ಮಂಗಳವಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಹಾಲಿನ ದರ ಏರಿಕೆ ಎಂದ ಕೂಡಲೇ ಎಲ್ಲರು ಗಾಬರಿಯಾಗುತ್ತಾರೆ. ದರ ಏರಿಕೆ ಎಂದರೆ ಎರಡು ರೀತಿ ಇದೆ. ಒಂದು ಹಾಲು ಉತ್ಪಾದಕರಿಗೆ ಹೆಚ್ಚಿನ ದರ ಕೊಡೋದು ಮತ್ತೊಂದು ಖರೀದಿ ಮಾಡುವವರಿಗೆ ದರ ಹೆಚ್ಚು ಮಾಡುವುದು. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮಲ್ಲಿ ಈ ಎರಡು ದರಗಳು ಕಡಿಮೆ ಇದೆ. ಹಾಲು ಉತ್ಪಾದಕರಿಗೆ ನಾವು ಸಹಾಯ ಮಾಡಬೇಕಿದೆ. ಇದಕ್ಕಾಗಿ ಮುಂದಿನ ದಿನಗಳಲ್ಲಿ ಯಾರಿಗೂ ಹೊರೆ ಆಗದಂತೆ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.
ಅಮುಲ್ನೊಂದಿಗೆ ಕೆಎಂಎಫ್ಅನ್ನು ವಿಲೀನ ಮಾಡುವ ಪ್ರಶ್ನೆಯೇ ಇಲ್ಲ, ಅಮೂಲ್ ಪ್ರತ್ಯೇಕವಾದ ಸಂಸ್ಥೆ. ಅದೇ ರೀತಿ ಕೆಎಂಎಫ್ ಪ್ರತ್ಯೇಕವಾದ ಸಂಸ್ಥೆ ಎಂದು ಹೇಳಿದರು.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…