ಮೈಸೂರು: ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ ಇಂದು(ಏ.14) ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಿದ್ದಾರೆ.
ಈ ವೇಳೆ ಮೋದಿ ಅವರ ಕಾಲು ಮುಟ್ಟಿ ರಾಮ್ದಾಸ್ ನಮಸ್ಕರಿಸಿದರು. ಇನ್ನು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯುವ ಸೌಭಾಗ್ಯ ಸಿಕ್ಕಿದೆ. ತಾಯಿ ಭುವನೇಶ್ವರಿ, ತಾಯಿ ಕಾವೇರಿಗೆ ನನ್ನ ಪ್ರಣಾಮ ಸಲ್ಲಿಸುತ್ತೇನೆ ಎಂದರು.
ಹೆಚ್.ಡಿ.ದೇವೇಗೌಡರು ದೇಶದ ಅತ್ಯಂತ ಹಿರಿಯ ನಾಯಕರು, ಅವರ ಆಶೀರ್ವಾದ ಸಿಕ್ಕಿರುವುದು ಕೂಡ ಒಂದು ಸೌಭಾಗ್ಯವಾಗಿದೆ. ಮೈಸೂರು ಸೇರಿದಂತೆ ಇಡೀ ಕರ್ನಾಟಕದ ಆಶೀರ್ವಾದ ನಮಗೆ ಸಿಗಬೇಕು. ಈ ಲೋಕಸಭಾ ಚುನಾವಣೆ ಮುಂದಿನ 5 ವರ್ಷ ಬಹಳ ಮಹತ್ವದ್ದಾಗಿದೆ ಎಂದು ಹೇಳಿದರು.
ಕಳೆದ ಹತ್ತು ವರ್ಷಗಳಲ್ಲಿ ರಾಷ್ಟ್ರಕ್ಕೆ ಗೌರವ ತಂದುಕೊಟ್ಟ ವ್ಯಕ್ತಿ ಶ್ರೀ ನರೇಂದ್ರ ಮೋದಿ.
– ಮಾಜಿ ಪ್ರಧಾನಿ ಶ್ರೀ @H_D_Devegowda#NamoWaveInKarnataka pic.twitter.com/NgbrIbb7zF
— BJP Karnataka (@BJP4Karnataka) April 14, 2024