ಮೈಸೂರು: 2018ರ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಚಾಮುಂಡೇಶ್ವರಿ ಕ್ಷೇತ್ರದ ಮತದಾರರು ಮನೆಗೆ ಕಳುಹಿಸಿದ್ದರು ಎಂದು ಮೈಸೂರು ಕೊಡಗು ಸಂಸದ ಪ್ರತಾಪಸಿಂಹ ಟಾಂಗ್ ನೀಡಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಹಿಂದಿನ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅನುಮೋದನೆ ಪಡೆದ ಯೋಜನೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎನ್ಎಚ್ಎಐ ಎಕ್ಸ್ಪ್ರೆಸ್ ಮಾರ್ಗವನ್ನು ಅನುಮೋದಿಸುವ ಪ್ರಕ್ರಿಯೆಯು ಹೇಗೆ ನಡೆಯುತ್ತದೆ ಎಂದು ಮಾಜಿ ಪಿಡಬ್ಲ್ಯುಡಿ ಸಚಿವ ಎಚ್ಸಿ ಮಹದೇವಪ್ಪ ಮತ್ತು ಸಿದ್ದರಾಮಯ್ಯನವರಿಗೆ ತಿಳಿದಿಲ್ಲ. ಎಕ್ಸ್ಪ್ರೆಸ್ವೇಗೆ ಯಾರು ಕಾರಣ ಎಂಬುದು ಜನರಿಗೆ ಚೆನ್ನಾಗಿ ತಿಳಿದಿದೆ, ಆದ್ದರಿಂದ ಐಎನ್ಸಿ ನಾಯಕರು ಸುಳ್ಳಿನ ಮೂಲಕ ಜನರನ್ನು ಮರುಳು ಮಾಡಲು ಪ್ರಯತ್ನಿಸಬಾರದು ಎಂದು ಅವರು ಹೇಳಿದರು.
ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಮಾರ್ಗವನ್ನು ಉದ್ಘಾಟಿಸಲಿದ್ದಾರೆ ಎಂದರು. ಎಸ್ ಪಿಜಿ ಅನುಮತಿ ನೀಡಿದರೆ ಎಕ್ಸ್ ಪ್ರೆಸ್ ವೇನಲ್ಲಿ ರೋಡ್ ಶೋ ನಡೆಸುತ್ತೇವೆ ಎಂದರು. ಒಟ್ಟು 2 ಕಿ.ಮೀ ರೋಡ್ ಶೋ ಮಾಡುವ ಉದ್ದೇಶ ಹೊಂದಿದ್ದೇವೆ. ರೋಡ್ ಶೋ ಬಳಿಕ ಮಂಡ್ಯದ ಮದ್ದೂರು ಸಮೀಪದ ಗೆಜ್ಜೆಲಗೆರೆಯಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ.
ಟೋಲ್ ಸಂಗ್ರಹದ ವಿಚಾರವಾಗಿ ಪ್ರತಿಕ್ರಿಯಿಸಿ, ಸರ್ವಿಸ್ ರಸ್ತೆ ಪೂರ್ಣಗೊಳಿಸಲು ಜಮೀನಿನ ಕುರಿತು ನ್ಯಾಯಾಲಯದ ಮೊಕದ್ದಮೆ ಬಾಕಿ ಇದೆ. ಅದು ನಿರ್ಧಾರವಾದ ನಂತರ ಸರ್ವೀಸ್ ರಸ್ತೆಯನ್ನು ಶೀಘ್ರ ಆರಂಭಿಸಲಾಗುವುದು. ಹೆದ್ದಾರಿಯ ಒಂದು ಭಾಗದ ಟೋಲ್ ಸಂಗ್ರಹವನ್ನು ಮಾರ್ಚ್ 14ಕ್ಕೆ ಮುಂದೂಡಿದ್ದೇವೆ. ಸರ್ವೀಸ್ ರಸ್ತೆ ಇಲ್ಲದಿದ್ದರೂ ಸರ್ಕಾರ ಟೋಲ್ ಸಂಗ್ರಹಿಸಲು ಯೋಜಿಸಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ನಿರ್ಮಿಸಿದ ಮೈಸೂರು-ಊಟಿ ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ ಇಲ್ಲ. ಈಗ ಎಲ್ಲರೂ ಬೆಂಗಳೂರು-ಮೈಸೂರು ಹೆದ್ದಾರಿ ಸರ್ವೀಸ್ ರಸ್ತೆ ಬಗ್ಗೆ ಮಾತನಾಡುತ್ತಿದ್ದಾರೆ. ಸರ್ವಿಸ್ ರಸ್ತೆಯನ್ನು ವ್ಯವಸ್ಥಿತವಾಗಿ ಮಾಡುತ್ತಿದ್ದೇವೆ. ಸರ್ವೀಸ್ ರಸ್ತೆ ಮಾಡದೆ ಟೋಲ್ ವಸೂಲಿ ಮಾಡಿದ್ದು ಹೇಗೆ ಎಂದು ಕಾಂಗ್ರೆಸ್ ಮುಖಂಡ ಎಚ್.ಸಿ.ಮಹದೇವಪ್ಪ ಅವರನ್ನು ಕೇಳಿ ಎಂದು ಪ್ರತಾಪ್ ಸಿಂಹ ತಿರುಗೇಟು ನೀಡಿದರು.
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…
ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…
ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…