ಮೈಸೂರು: ರಾಹುಲ್ ಗಾಂಧಿ ಅವರು 2019ರಲ್ಲಿ ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲೆ ಮಾನವಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕೆಲ ಹಂತದ ನ್ಯಾಯಾಲಯ ಶಿಕ್ಷೆ ವಿಧಿಸಿ ನೀಡಿದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಬೆಳಗ್ಗೆ ನ್ಯಾಯಾಲಯದ ಮುಂಭಾಗ ವಿಜಯೋತ್ಸವ ಆಚರಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯರಾದ ನಜರ್ ಬಾದ್ ನಟರಾಜ್ ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಅವರ ಜನಪ್ರಿಯತೆ ಸಹಿಸಲು ಆಗುತ್ತಿಲ್ಲ. ಭಾರತ್ ಜೋಡೋ ಯಾತ್ರೆಯ ಯಶಸ್ಸು ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹೀಗಾಗಿ ರಾಹುಲ್ ಗಾಂಧಿ ಅವರ ಮೇಲೆ ವಿನಾಕಾರಣ ಕೇಸು ದಾಖಲಿಸಿ ಹಿಮ್ಮೆಟಿಸುವ ಹುನ್ನಾರ ನಡೆಯುತ್ತಿದೆ. ಕಾಂಗ್ರೆಸ್ ಇಂತಹ ನೂರಾರು ಪ್ರಕರಣಗಳನ್ನು ಎದುರಿಸಿ ಎದ್ದು ನಿಲ್ಲುವ ಶಕ್ತಿ ಹೊಂದಿದೆ. ಇಂತಹ ಗೊಡ್ಡು ಬೆದರಿಕೆಗೆಲ್ಲ ಹೆದರುವುದಿಲ್ಲ ಎಂದು ಹೇಳಿದರು.
ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ಮಾತನಾಡಿ ಇದು ಪ್ರಜಾಪ್ರಭುತ್ವಕ್ಕೆ ಸಂದ ಜಯವಾಗಿದೆ, ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿರವರನ್ನು ಅನರ್ಹಗೊಳಿಸಿದ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ಮಧ್ಯಂತರ ತೀರ್ಪು ನೀಡಿದ್ದು ದೇಶದಲ್ಲಿನ ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಆದ ಸೋಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಅಧ್ಯಕ್ಷರಾದ ಕೆ ಎಸ್ ಶಿವರಾಮು ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್, ಲೋಕೇಶ್, ಕರಿಗೌಡ, ಕೇಶವ್ಯ, ಲೋಕೇಶ್ ಕುಮಾರ್, ಯುವ ಮುಖಂಡ ರವಿಚಂದ್ರ, ಕಿರಣ್ ಗೋಪಾಲ್, ನವೀನ್ ಕೆಂಪಿ, ಹಾಗೂ ಇನ್ನಿತರರು ಹಾಜರಿದ್ದರು.