ಮೈಸೂರು : ರಾಜ್ಯದಲ್ಲಿ ರಾಬರಿ, ದರೋಡೆ, ಪ್ರಕರಣ ಹೆಚ್ಚಳ ವಿಚಾರವಾಗಿ ಮೈಸೂರಿನಲ್ಲಿ ಎಂಎಲ್ಸಿ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಪರಮೇಶ್ವರ್ ಒಬ್ಬ ಡಮ್ಮಿ ಹೋಮ್ ಮಿನಿಸ್ಟರ್. ಸಬ್ ಇನ್ಸ್ಪೆಕ್ಟರ್ ವರ್ಗಾವಣೆಗಷ್ಟೇ ಸೀಮಿತವಾಗಿದ್ದಾರೆ. ಗೃಹ ಇಲಾಖೆಯ ಎಲ್ಲಾ ಅಧಿಕಾರ ಸಿಎಂ ಬಳಿ ಇದೆ. ರಾಜ್ಯದ ಬೆಳವಣಿಗೆ ನೋಡಿದ್ರೆ ಹೋಮ್ ಮಿನಿಸ್ಟರ್ ಡಮ್ಮಿ ಆಗಿದ್ದಾರೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ ಎಂದು ಮೈಸೂರಿನಲ್ಲಿ ಹೆಚ್ ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.
ಮೂಡ ಹಗರಣದಲ್ಲಿ ಲೋಕಾಯುಕ್ತದಿಂದ ಸಿಎಂಗೆ ಕ್ಲೀನ್ ಚೀಟ್ ವಿಚಾರವಾಗಿ ಮಾತನಾಡಿ, ಲೋಕಾಯುಕ್ತ ಸರ್ಕಾರದ ಕೈಗೊಂಬೆ. ಲೋಕಾಯುಕ್ತರಿಗೆ ಪೋಸ್ಟಿಂಗ್ ಮಾಡೋದು ಸರ್ಕಾರ. ಅಧಿಕಾರಿಗಳು ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಾರೆ. ಇಡೀ ದೇಶದಲ್ಲೇ ಇಂತಹ ದೊಡ್ಡ ಹಗರಣವಾಗಿಲ್ಲ. ಮೈಸೂರಿನವರೇ ಸಿಎಂ ಆಗಿರುವಾಗ ಇಲ್ಲೇ ಹಗರಣವಾಗಿದೆ. ಲೋಕಾಯುಕ್ತರು ಯಾವುದನ್ನೂ ಸರಿಯಾಗಿ ಪರಮರ್ಶೆ ಮಾಡಿಲ್ಲ.
ಸಿಎಂ ಪ್ರೆಸ್ ಮೀಟ್ ಮಾಡುವಾಗ ಹಿಂದೇಯಿಂದ ಸಚಿವ ಭೈರತಿ ಸುರೇಶ್ 62 ಕೋಟಿ ಸರ್ ಎಂದು ಹೇಳುತ್ತಾರೆ. ಇದನ್ನೇಕೆ ಲೋಕಾಯುಕ್ತ ಸಿರಿಯಸ್ ಆಗಿ ತೆಗೆದುಕೊಂಡಿಲ್ಲ.? ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಾಗಿ ಕೆಲಸ ಮಾಡಬೇಕು. ಯಾವುದೊ ಶಾಸಕರ ಅಧಿಕಾರಿಗಳಗಬಾರದು.
ಅರಮನೆ ಆಸ್ತಿ ವಿಚಾರವಾಗಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ ವಿಚಾರ ವಾಗಿ ಎಂಎಲ್ಸಿ ಹೆಚ್ ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಸಿಎಂ ಅದಾಗೆಲ್ಲ ಅರಮನೆ ವಿಚಾರದಲ್ಲಿ ಗೊಂದಲ ಮೂಡಿಸುತ್ತಾರೆ. ಸುಗ್ರೀವಾಜ್ಞೆ ಹೊರಡಿಸುವ ಬದಲು ಮಹಾರಾಣಿ ಅವರೊಂದಿಗೆ ಕುಳಿತು ಮಾತನಾಡಿ ಸೆಟಲ್ಮೆಂಟ್ ಮಾಡಬಹುದಿತ್ತು. ಅಧಿಕಾರ ಇದೆ ಎಂದು ಸುಗ್ರೀವಾಜ್ಞೆ ತರುವುದು ಸರಿಯಲ್ಲ.
ಸಿಎಂ ಮೈಸೂರು ಮಹಾರಾಜರ ಬಗ್ಗೆ ಲಘುವಾಗಿ ಮಾತನಾಡುವುದು ಸರಿಲ್ಲ. ಸಿಎಂ ಅದಾಗೆಲ್ಲ ತೀಟೆ ಮಾಡುವುದು, ಅನವಶ್ಯಕ ಕಿರುಕುಳ ಮಾಡ್ತಿದ್ದಾರೆ. ರಸ್ತೆ ಹೆಸರಲ್ಲಿ ರಾಜರ ಹೆಸರು ತೆಗೆಯುವುದು. ಅಂತಹ ಮಹಾರಾಜ ರ ಬಗ್ಗೆ ಲಘುವಾಗಿ ಮಾತನಾಡುವುದು, ಕೆಣಕುವುದು ಸರಿಯಲ್ಲ. ನಾನು ಡೆಮೋಕ್ರ್ಯಾಟಿಕ್ ಎಂದು ತೋರಿಸಿಕೊಳ್ಳಲು ಇದೆನ್ನೆಲ್ಲ ಮಾಡುತ್ತಿದ್ದಾರೆ. ಈ ರೀತಿ ಸಿಎಂ ನಡೆದುಕೊಳ್ಳಬಾರದು.
ಬಿಜೆಪಿ ವರಿಷ್ಟರಿಂದ ಸಭೆ ನಡೆಸಿದ ವಿಚಾರವಾಗಿ ಎಂಎಲ್ಸಿ ಹೆಚ್ ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷದಲ್ಲೂ ಡಮ್ಮಿ ವರಿಷ್ಠರು. ಯಾರೋ ಹೇಳಿದ್ದನ್ನು ಬಂದು ಹೇಳೋ ವರಿಷ್ಠರು ಇದ್ದಾರೆ. ಎಲ್ಲಾ ಪಾರ್ಟಿಯಲ್ಲೂ ಇದೆ ತರ ವರಿಷ್ಠರು ಇದ್ದಾರೆ. ಜನರಿಗೆ ವಿಜಯೇಂದ್ರ ಯಾರು ಯಡಿಯೂರಪ್ಪ ಯಾರು ಎಂದು ಎಲ್ಲರಿಗೂ ಗೊತ್ತು. ವಿಜಯೇಂದ್ರ ಗೆ ಅಧಿಕಾರ ಮಾಡಲು ಯತ್ನಾಳ್ ಗುಂಪು ಬಿಡುತ್ತಿಲ್ಲ.
ನನ್ನ ಪ್ರಕಾರ ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ ನಡೆಯಬೇಕು. ನನ್ನನ್ನ ಬಿಜೆಪಿ ಸಭೆಗೆ ಕರೆಯೋದಿಲ್ಲ. ಸಭೆಯಲ್ಲಿ ಎಲ್ಲಿ ನಾನು ಕೆಲವು ವಿಷಯ ಬಾಯಿ ಬಿಡುತ್ತೇನೋ ಎಂದು ಕರೆಯೋದಿಲ್ಲ. ಮೈಸೂರಿನ ಬಿಜೆಪಿಯವರು ಕರೆಯೋದಿಲ್ಲ. ಹಾಗೆ ಬೆಂಗಳೂರಿನಲ್ಲಿ ನಡೆದ ಸಭೆಗೂ ಕರೆದಿಲ್ಲ.
ರೆಡ್ಡಿ – ಶ್ರೀರಾಮುಲು ಜಟಾಪಟಿ ವಿಚಾರವಾಗಿ ಮಾತನಾಡಿ, ಶ್ರೀರಾಮುಲು ಪರ ಎಂಎಲ್ಸಿ ಹೆಚ್ ವಿಶ್ವನಾಥ್ ಬ್ಯಾಟಿಂಗ್ ಮಾಡಿದ್ದಾರೆ. ರೆಡ್ಡಿ ಗೆದ್ದಿದ್ದೆ ಶ್ರೀರಾಮುಲು ಯಿಂದ ದುಡ್ಡು ರೆಡ್ಡಿದು ವೋಟ್ ಶ್ರೀರಾಮುಲುದು. ದುಡ್ಡೇನು ಅವರಪ್ಪನ ಮನೆಯಿಂದ ತಂದಿದ್ದಾ? ಗಣಿ ದುಡ್ಡಲ್ಲಿ ರೆಡ್ಡಿ ಗೆದ್ದಿದ್ದಾನೆ. ಶ್ರೀರಾಮುಲು ವಾಲ್ಮೀಕಿ ಸಮುದಾಯದ ಒಬ್ಬ ನಾಯಕ. ಆತನ ಬಗ್ಗೆ ರೆಡ್ಡಿ ಹೀಗೆಲ್ಲ ಮಾತನಾಡಬಾರದು. ವಾಲ್ಮೀಕಿ, ದಲಿತ, ಹಿಂದುಳಿದ ವರ್ಗಗಳಿಂದ ರೆಡ್ಡಿ ಗೆದ್ದಿರೋದು. ಲಘುವಾಗಿ ರಾಮುಲು ಬಗ್ಗೆ ಮಾತನಾಡಬಾರದು. ಎಂಎಲ್ಸಿ ಹೆಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.
ಮೂಡ ಹಗರಣದಲ್ಲಿ ಶಾಸಕ ಜಿಟಿಡಿ ಕುಟುಂಬದ ಹೆಸರಿರುವ ವಿಚಾರವಾಗಿ ಮಾತನಾಡಿ, ಶಾಸಕ ಜಿಟಿಡಿ ಯಿಂದ ಸಿಎಂ ಮೆಚ್ಚಿಸುವ ಕೆಲಸ. ತಮ್ಮ ಹಗರಣ ತಪ್ಪಿಸಿಕೊಳ್ಳುಳು ಇದೆಲ್ಲ ಯತ್ನ. ಹಗರಣ ಮುಚ್ಚಿಕೊಳ್ಳಲು ಸಿಎಂ ಮೆಚ್ಚಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮೂಡ ಹಗರಣದಲ್ಲಿ ಜಿಟಿಡಿ ಕುಟುಂಬದ ಪಾತ್ರ ಇದೆ. ಆದರೆ ಜಿಟಿಡಿ ಪುತ್ರ ಶಾಸಕ ಹರೀಶ್ ಗೌಡನ ಪಾತ್ರವಿಲ್ಲ. ಜಿಟಿಡಿ ಜೆಡಿಎಸ್ ಬಿಟ್ಟರು ಏನೂ ತೊಂದರೆ ಆಗಲ್ಲ. ಜೆಡಿಎಸ್ ಗೆ ಬಂದು ಎಲ್ಲರನ್ನು ಗೆಲ್ಲಿಸಿದ್ದಾರಾ.? ಎಂದು ಎಂಎಲ್ಸಿ ಹೆಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.