ನಂಜನಗೂಡು: ನಂಜನಗೂಡು ನಗರದ ಶ್ರೀ ನಂಜುಂಡೇಶ್ವರಸ್ವಾಮಿ ದೇವಾಲಯಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ ನೀಡಿದರು. ಕುಟುಂಬ ಸಮೇತ ನಟ ರಾಕಿಂಗ್ ಸ್ಟಾರ್ ಯಶ್ ಆಗಮಿಸಿ ದೇವರ ದರ್ಶನ ಪಡೆದರು.
ಶ್ರೀನಂಜುಂಡೇಶ್ವರಸ್ವಾಮಿ ದೇವಾಲಯಕ್ಕೆ ಪತ್ನಿ ರಾಧಿಕಾ ಪಂಡಿತ್ ಜೊತೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಗಣಪತಿ, ಸುಬ್ರಮಣ್ಯ, ನಾರಾಯಣಸ್ವಾಮಿ, ಪಾರ್ವತಮ್ಮ, ಚಂಡಿಕೇಶ್ವರ ದೇವಾಲಯಗಳಿಗೆ ತೆರಳಿ ತಮ್ಮ ಇಬ್ಬರು ಮಕ್ಕಳೊಂದಿಗೆ ಪೂಜೆ ಸಲ್ಲಿಸಿದ್ದಾರೆ.
ನಟ ಯಶ್ ಮಾತನಾಡಿ, ನಾನು ಸಮಯವನ್ನು ವೆಸ್ಟ್ ಮಾಡುವುದಿಲ್ಲ. ಮುಂದಿನ ಸಿನಿಮಾ ಮಾಡಲು ತಯಾರಿ ನಡೆಸಿದ್ದೇವೆ. ನನಗೆ ಜವಾಬ್ದಾರಿ ಇದೆ. ಎಲ್ಲರು ದುಡ್ಡು ಕೊಟ್ಟು ಸಿನಿಮಾ ನೋಡ್ತಾರೆ ಅದಕ್ಕೆ ಒಂದು ವ್ಯಾಲ್ಯೂ ಇರಬೇಕು. ಮುಂದಿನ ಸಿನಿಮಾ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ.
ಕುಟುಂಬ ಸಮೇತ ದೇವಾಲಯಕ್ಕೆ ಭೇಟಿ ನೀಡಿ ಶ್ರೀ ನಂಜುಂಡೇಶ್ವರನಿಗೆ ಪೂಜೆ ಸಲ್ಲಿಸಿದ್ದೇನೆ ದೇವರ ಮತ್ತು ಜನರ ಆರ್ಶೀವಾದ ಇದ್ದರೆ ನನಗೆ ಅಷ್ಟೇ ಸಾಕು ಎಂದರು.
ಇನ್ನೂ ನೆಚ್ಚಿನ ನಟನ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿದಿದ್ದರು. ನಂಜನಗೂಡು ಡಿವೈಎಸ್ಪಿ ಗೋವಿಂದರಾಜು ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.