Bengaluru 31°C

ನಂಜನಗೂಡು : ಶಿವಶರಣ ಶ್ರೀ ಸಿದ್ದರಾಮೇಶ್ವರರ ಜಯಂತಿ ಆಚರಣೆ

ತಾಲೂಕು ಆಡಳಿತ ವತಿಯಿಂದ ಇಂದು ತಾಲೂಕು ಕಚೇರಿ ಸಭಾಂಗಣದಲ್ಲಿ ಶಿವಶರಣ ಶ್ರೀ ಸಿದ್ದರಾಮೇಶ್ವರರ ಜಯಂತಿ ಆಚರಣೆಯಲ್ಲಿ ಸರಳವಾಗಿ ಆಚರಿಸಲಾಯಿತು.

ನಂಜನಗೂಡು : ತಾಲೂಕು ಆಡಳಿತ ವತಿಯಿಂದ ಇಂದು ತಾಲೂಕು ಕಚೇರಿ ಸಭಾಂಗಣದಲ್ಲಿ ಶಿವಶರಣ ಶ್ರೀ ಸಿದ್ದರಾಮೇಶ್ವರರ ಜಯಂತಿ ಆಚರಣೆಯಲ್ಲಿ ಸರಳವಾಗಿ ಆಚರಿಸಲಾಯಿತು.


ತಹಶೀಲ್ದಾರ್ ಶಿವಕುಮಾರ್ ಕಾಸನೂರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಭೋವಿ ಜನಾಂಗದ ಮುಖಂಡರು ಶ್ರೀ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಸಲ್ಲಿಸಿದರು.


ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಗುಂಡ್ಲುಪೇಟೆ ತಾಲೂಕಿನ ಮೂಡಗೂರು ಮಠದ ಶ್ರೀ ಇಮ್ಮಡಿ ಉದ್ದಾನ ಸ್ವಾಮಿಗಳು ಆಶೀರ್ವಚನ ನೀಡಿ ಶ್ರೀ ಸಿದ್ದರಾಮೇಶ್ವರ ಜೀವನ ಚರಿತ್ರೆ ಹಾಗೂ ಅವರ ವಿಚಾರಧಾರೆಗಳನ್ನು ತಿಳಿಸುತ್ತಾ ಶ್ರೀ ಸಿದ್ದರಾಮೇಶ್ವರರು ಉತ್ತಮ ವಚನಕಾರರು ಹಾಗೂ ಶಿವಶರಣರು ಆಗಿದ್ದರು ಅವರ ತತ್ವ ಆದರ್ಶಗಳನ್ನು ಇಂದಿನ ಪೀಳಿಗೆ ಗೆ ತಿಳಿಸುವ ಮೂಲಕ ಅವರನ್ನು ಸುಸಂಸ್ಕೃತರನ್ನಾಗಿ ಮಾಡುವಂತೆ ತಿಳಿಸಿದರು.


ತಹಸೀಲ್ದಾರ್ ಶಿವಕುಮಾರ್ ಕಾಸನೂರ್ ಶ್ರೀ ಸಿದ್ದರಾಮೇಶ್ವರ ಜಯಂತಿ ಶುಭಾಶಯ ಕೋರಿದರು ಇದೇ ಸಂದರ್ಭ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಭೋವಿ ಸಮಾಜದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಮಾಜದ ಮುಖಂಡರಾದ ಲಿಂಗರಾಜು, ಪಾಪಣ್ಣ, ಮಹಾದೇವ್, ವಸಂತ, ಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


Nk Channel Final 21 09 2023