Categories: ಮೈಸೂರು

ಮೈಸೂರು ಜಿಲ್ಲಾ ಕಸಾಪ ಭವನದ ಆವರಣದಲ್ಲಿ ಶ್ರಮದಾನ

ಮೈಸೂರು: ಅದಮ್ಯ ರಂಗಶಾಲೆಯ ಸಹಭಾಗಿತ್ವದಲ್ಲಿ ನಗರದ ಊಟಿ ರಸ್ತೆಯ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ವಿಜಯನಗರದ ಮೊದಲ ಹಂತದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣವನ್ನು ಸ್ವಚ್ಛಗೊಳಿಸುವ ಮುಖಾಂತರ ಶ್ರಮದಾನ ಮಾಡಿದರು.

ಸತತ ಸುರಿಯುವ ಮಳೆಯಕಾರಣದಿಂದ ಸಾಹಿತ್ಯ ಭವನದ ಆವರಣದಲ್ಲಿ ಕಳೆಯು ಬೆಳೆದಿತ್ತಲ್ಲದೇ, ಹಲವು ರೀತಿಯ ತ್ಯಾಜ್ಯಗಳು ಚೆಲ್ಲಾಡಿದ್ದವು. ಜಿಲ್ಲಾ ಕಸಾಪ ಅಧ್ಯಕ್ಷರಾದ ಮಡ್ಡೀಕೆರೆ ಗೋಪಾಲ್ ಅವರ ಮನವಿಯ ಮೇರೆಗೆ ಜೆ.ಎಸ್.ಎಸ್. ಕಾಲೇಜಿನ ಎನ್.ಎಸ್.ಎಸ್. ತಂಡ ಸ್ವಚ್ಛತಾ ಕಾರ್ಯ ಕೈಗೊಂಡಿತು. ದಿನವಿಡೀ ಶ್ರಮದಾನ ಮಾಡಿದ ವಿದ್ಯಾರ್ಥಿಗಳು ಸ್ವಚ್ಛತೆಯ ಕಾರ್ಯದ ಜೊತೆಗೆ, ಸಾರ್ವಜನಿಕರಿಗೆ ನೈರ್ಮಲ್ಯದ ಅರಿವು ಮೂಡಿಸುವ ಜೊತೆಗೆ ತಮ್ಮ ಕನ್ನಡ ಪ್ರೇಮವನ್ನು ಮೆರೆದರು.

ಜೆ‌.ಎಸ್.ಎಸ್. ಕಾಲೇಜಿನ ರಾಷ್ಟ್ರೀಯ ಸ್ವಯಂಸೇವಾ ಅಧಿಕಾರಿ ಸಂತೋಷ್ ಕುಮಾರ್ ಅವರ ನೇತೃತ್ವದಲ್ಲಿ ಸುಮಾರು 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣವನ್ನು ಸ್ವಚ್ಛ ಮಾಡಿ, ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಕಾರ್ಯಕ್ರಮದ ಆಯೋಜಕರು ಮತ್ತು ಭಾಗಿಯಾಗಿದ್ದ ಸಾಹಿತ್ಯ ಪ್ರಿಯರಿಗೂ ಸ್ವಚ್ಛತೆಯ ಅರಿವು ಮೂಡಿಸಿದರು. ಈ ಸ್ವಚ್ಛತೆಯ ಕಾರ್ಯದಲ್ಲಿ ಅದಮ್ಯ ರಂಗಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಚಂದ್ರು ಮಂಡ್ಯ ಭಾಗಿಯಾಗಿದ್ದರು.

Ashika S

Recent Posts

ತಾಪಮಾನ ಏರಿಕೆ: ದೇಹಕ್ಕೆ ಪ್ರತಿದಿನ 2-3 ಲೀಟರ್​ ನೀರು ಅತ್ಯಗತ್ಯ

ಸುಡೋ ಬಿಸಿಲಿಗೆ ಜನ ತತ್ತಿರಿಸಿ ಹೋಗಿದ್ದು, ಮನೆಯಿಂದ ಹೊರಗೆ ಕಾಲಿಡಲು ಹೆದರುವಂತಾಗಿದೆ. ಈ ಬಾರಿ ಪ್ರತಿವರ್ಷಕ್ಕಿಂತ ಹೆಚ್ಚಾಗಿ ಬಿಸಿಲಿದೆ. ಈ…

12 mins ago

ಚಿನ್ನದ ಬೆಲೆಯಲ್ಲಿ ಇಳಿಕೆ : ಇಂದಿನ ಚಿನ್ನ ಬೆಳ್ಳಿ ದರ ಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಅಸ್ವಾಭಾವಿಕವಾಗಿ ಏರಿಕೆ ಕಂಡಿದ್ದು, ಇದೀಗ ಕೊಂಚ ಇಳಿಕೆಯಾಗಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್​ಗೆ…

37 mins ago

ವಿವಾದಾತ್ಮಕ ಹೇಳಿಕೆ : ಶಾಸಕ ರಾಜು ಕಾಗೆಗೆ ಚುನಾವಣಾ ಇಲಾಖೆ ನೋಟಿಸ್‌

ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ‌…

8 hours ago

ಕಾರ್ತಿಕ್​ ಜಯರಾಮ್​ ಹುಟ್ಟುಹಬ್ಬ ಪ್ರಯುಕ್ತ ‘ದಿ ವೀರ್​’​ ಪೋಸ್ಟರ್ ಔಟ್‌

ಸ್ಯಾಂಡಲ್​ವುಡ್​ನ ಖ್ಯಾತ ನಟ ಕಾರ್ತಿಕ್​ ಜಯರಾಮ್​ ಅಲಿಯಾಸ್​ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

9 hours ago

ಕೊಳೆತ ಸ್ಥತಿಯಲ್ಲಿ ಮಹಿಳೆ ಮೃತ ದೇಹ ಪತ್ತೆ

ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…

9 hours ago

ವಿಜಯ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ ಅಮೀತ್ ಶಾಗೆ ಅದ್ದೂರಿ ಸ್ವಾಗತ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…

10 hours ago