News Karnataka Kannada
Sunday, April 28 2024
ಮೈಸೂರು

ಗಡಿ ಭಾಗದಲ್ಲಿ ಅರಳಿದ ಭಗವಾನ್ ಬುದ್ಧನ ಪ್ರತಿಮೆ: ಗ್ರಾಮಸ್ಥರಲ್ಲಿ ಸಂಭ್ರಮ..

New Project 2024 01 31t110308.970
Photo Credit : News Kannada

ಮೈಸೂರು: ಅಂಬೇಡ್ಕರ್ ಸಮುದಾಯ ಭವನದಲ್ಲಿ ಬುದ್ಧ ಮೂರ್ತಿ ಪ್ರತಿಷ್ಠಾಪಿಸಿ ಗ್ರಾಮಸ್ಥರು ಸಂಭ್ರಮಿಸಿದ್ದಾರೆ. ಮೈಸೂರು ಜಿಲ್ಲೆ ಸರಗೂರಿನ ಸಮೀಪದ ಮೈಸೂರು ಜಿಲ್ಲೆಯ ಗಡಿಭಾಗದ ಯಶವಂತಪುರ ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಮೂರು ಅಡಿ ಎತ್ತರದ ಕಂಚಿನ ಬುದ್ದ ಪ್ರತಿಮೆ ಅನಾವರಣಗೊಂಡಿದೆ. ಚಾಮರಾಜನಗರ ಜಿಲ್ಲೆಯ ಭೋದಿ ಬಂತೇಜಿರವರು ಗೌತಮ ಬುದ್ಧರ ವಿಚಾರಗಳನ್ನು ಬೋಧಿಸುವ ಮೂಲಕ ಪ್ರತಿಷ್ಠಾಪಿಸಿದರು.

ಬುದ್ಧನ ನಾಡಿನಲ್ಲಿ ಹುಟ್ಟಿದ ನಾವೆಲ್ಲ ಧನ್ಯರು ಬುದ್ಧರ ಮಾರ್ಗದಲ್ಲಿ ನಡೆದು ದೇಶಕ್ಕೆ ಬೆಳಕಾಗಬೇಕು ಎಂದು ಬೋಧಿ ಬಂತೆಜಿ ಸಂದೇಶ ನೀಡಿದರು. ಹುಣಸೂರು ಮೂಲದ ಶೈಲಜಾ ಮಹದೇವಸ್ವಾಮಿ ದಾನಿಗಳು ಬೆಲೆಬಾಳು ಬುದ್ಧ ಮೂರ್ತಿಯನ್ನು ಕೊಡುಗೆಯಾಗಿ ನೀಡಿದರು. ಯಶವಂತಪುರ ಗ್ರಾಮದ ದೊಡ್ಡ ಯಜಮಾನರಾದ ನಿವೃತ್ತ ಪೊಲೀಸ್ ಅಧಿಕಾರಿ ಮರಿಸ್ವಾಮಿ, ಚಿಕ್ಕ ಯಜಮಾನರಾದ ಮಲ್ಲೇಶ್ ಯುಮೇನ್ ರೈಟ್ಸ್ ತಾಲೂಕು ಅಧ್ಯಕ್ಷರಾದ ಯಶವಂತಪುರ ಶ್ರೀನಿವಾಸ್ ಗ್ರಾ. ಪಂ.ಸದಸ್ಯ ಶಿವಲಿಂಗಯ್ಯ ಗ್ರಾಮದ ಎಲ್ಲಾ ಸಾರ್ವಜನಿಕರು ಒಮ್ಮತದಿಂದ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಸಮುದಾಯ ಭವನದಲ್ಲಿ ಬುದ್ಧ ಪ್ರತಿಮೆ ಸ್ಥಾಪಿಸಿ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಹೆಚ್. ಡಿ ಕೋಟೆ ಮತ್ತು ಸರಗೂರು ತಾಲ್ಲೂಕಿನ ದಲಿತ ಪರ ಸಂಘಟನೆಗಳ ಮುಖಂಡರು ವಿಚಾರವಾದಿಗಳು, ಯಶವಂತಪುರ ಗ್ರಾಮದ ಮಹಿಳೆಯರು ಮಕ್ಕಳು ಗ್ರಾಮಸ್ಥರು ಭಾಗವಹಿಸಿ, ಸಂಭ್ರಮಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು