Categories: ಮೈಸೂರು

ಗಡಿ ಭಾಗದಲ್ಲಿ ಅರಳಿದ ಭಗವಾನ್ ಬುದ್ಧನ ಪ್ರತಿಮೆ: ಗ್ರಾಮಸ್ಥರಲ್ಲಿ ಸಂಭ್ರಮ..

ಮೈಸೂರು: ಅಂಬೇಡ್ಕರ್ ಸಮುದಾಯ ಭವನದಲ್ಲಿ ಬುದ್ಧ ಮೂರ್ತಿ ಪ್ರತಿಷ್ಠಾಪಿಸಿ ಗ್ರಾಮಸ್ಥರು ಸಂಭ್ರಮಿಸಿದ್ದಾರೆ. ಮೈಸೂರು ಜಿಲ್ಲೆ ಸರಗೂರಿನ ಸಮೀಪದ ಮೈಸೂರು ಜಿಲ್ಲೆಯ ಗಡಿಭಾಗದ ಯಶವಂತಪುರ ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಮೂರು ಅಡಿ ಎತ್ತರದ ಕಂಚಿನ ಬುದ್ದ ಪ್ರತಿಮೆ ಅನಾವರಣಗೊಂಡಿದೆ. ಚಾಮರಾಜನಗರ ಜಿಲ್ಲೆಯ ಭೋದಿ ಬಂತೇಜಿರವರು ಗೌತಮ ಬುದ್ಧರ ವಿಚಾರಗಳನ್ನು ಬೋಧಿಸುವ ಮೂಲಕ ಪ್ರತಿಷ್ಠಾಪಿಸಿದರು.

ಬುದ್ಧನ ನಾಡಿನಲ್ಲಿ ಹುಟ್ಟಿದ ನಾವೆಲ್ಲ ಧನ್ಯರು ಬುದ್ಧರ ಮಾರ್ಗದಲ್ಲಿ ನಡೆದು ದೇಶಕ್ಕೆ ಬೆಳಕಾಗಬೇಕು ಎಂದು ಬೋಧಿ ಬಂತೆಜಿ ಸಂದೇಶ ನೀಡಿದರು. ಹುಣಸೂರು ಮೂಲದ ಶೈಲಜಾ ಮಹದೇವಸ್ವಾಮಿ ದಾನಿಗಳು ಬೆಲೆಬಾಳು ಬುದ್ಧ ಮೂರ್ತಿಯನ್ನು ಕೊಡುಗೆಯಾಗಿ ನೀಡಿದರು. ಯಶವಂತಪುರ ಗ್ರಾಮದ ದೊಡ್ಡ ಯಜಮಾನರಾದ ನಿವೃತ್ತ ಪೊಲೀಸ್ ಅಧಿಕಾರಿ ಮರಿಸ್ವಾಮಿ, ಚಿಕ್ಕ ಯಜಮಾನರಾದ ಮಲ್ಲೇಶ್ ಯುಮೇನ್ ರೈಟ್ಸ್ ತಾಲೂಕು ಅಧ್ಯಕ್ಷರಾದ ಯಶವಂತಪುರ ಶ್ರೀನಿವಾಸ್ ಗ್ರಾ. ಪಂ.ಸದಸ್ಯ ಶಿವಲಿಂಗಯ್ಯ ಗ್ರಾಮದ ಎಲ್ಲಾ ಸಾರ್ವಜನಿಕರು ಒಮ್ಮತದಿಂದ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಸಮುದಾಯ ಭವನದಲ್ಲಿ ಬುದ್ಧ ಪ್ರತಿಮೆ ಸ್ಥಾಪಿಸಿ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಹೆಚ್. ಡಿ ಕೋಟೆ ಮತ್ತು ಸರಗೂರು ತಾಲ್ಲೂಕಿನ ದಲಿತ ಪರ ಸಂಘಟನೆಗಳ ಮುಖಂಡರು ವಿಚಾರವಾದಿಗಳು, ಯಶವಂತಪುರ ಗ್ರಾಮದ ಮಹಿಳೆಯರು ಮಕ್ಕಳು ಗ್ರಾಮಸ್ಥರು ಭಾಗವಹಿಸಿ, ಸಂಭ್ರಮಿಸಿದರು.

Ramya Bolantoor

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

4 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

5 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

5 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

5 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

6 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

6 hours ago